ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರವ್ಯಾಮೋಹ ಧೃತರಾಷ್ಟ್ರನನ್ನೇ ಮೀರಿಸುವಂತಿದೆ ಎಂದು ಬಿಜೆಪಿ ಟ್ವೀಟ್ ಮಾಡುವ ಮೂಲಕ ಮುಖ್ಯಮಂತ್ರಿಗಳು ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ.
ಯತೀಂದ್ರ ಸಿದ್ದರಾಮಯ್ಯರನ್ನು ಶ್ಯಾಡೋ ಸಿಎಂ ಎಂದು ಬಿಜೆಪಿ ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ಸಿದ್ದರಾಮಯ್ಯನವರಿಗೆ ಸದ್ದಿಲ್ಲದೇ ಸಂವಿಧಾನಿಕ ಹುದ್ದೆಯನ್ನು ನೀಡಲಾಗಿದೆ ಎಂಬ ವಿಚಾರವಾಗಿ ಟೀಕಾ ಪ್ರಹಾರ ನಡೆಸಿದೆ.
ಸಿಎಂ ಸಿದ್ದರಾಮಯ್ಯ ರವರ ಪುತ್ರವ್ಯಾಮೋಹ, ಧೃತರಾಷ್ಟ್ರನನ್ನೇ ಮೀರಿಸುವಂತಿದೆ. ಸರ್ಕಾರದ ಆಡಳಿತದಲ್ಲಿ ಹಾಗೂ ವರ್ಗಾವಣೆ ದಂಧೆಯಲ್ಲಿ ಇನ್ನಿಲ್ಲದಂತೆ ಹಸ್ತಕ್ಷೇಪ ಮಾಡುವ ಆರೋಪ ಹೊತ್ತಿರುವ ಶ್ಯಾಡೋ ಸಿಎಂ ಡಾ. ಯತೀಂದ್ರರವರಿಗೆ ಈಗ ಸಾಂವಿಧಾನಿಕ ಹುದ್ದೆಯನ್ನು ದಯಪಾಲಿಸಲಾಗಿದೆ, ಅದು ಗುಟ್ಟಾಗಿ! ಎಂದು ಟೀಕೆ ಮಾಡಿದೆ.
ತಮ್ಮದು ಪಾರದರ್ಶಕ ಸರ್ಕಾರ ಎಂದು ಬೊಗಳೆ ಬಿಡುವ ಸಿದ್ದರಾಮಯ್ಯರವರು, ತಮ್ಮ ಪುತ್ರನಿಗೆ ನೀಡಿದ ಹುದ್ದೆಯ ನೇಮಕಾತಿ ಆದೇಶವನ್ನು ಇಷ್ಟು ದಿನ ಗುಟ್ಟಾಗಿರಿಸಿದ್ದರು ಎಂದು ಬಿಜೆಪಿ ವಾಗ್ದಾಳಿಯನ್ನು ನಡೆಸಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…