ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಪೈಪೋಟಿ ತೀವ್ರಗೊಂಡಿರುವ ನಡುವೆಯೇ ಇಬ್ಬರೂ ನಾಯಕರ ಪರ ಆಯಾ ಸಮುದಾಯಗಳ ನಡುವೆ ಜಾತಿ ರಾಜಕಾರಣ ಶುರುವಾಗಿದೆ. ಸಿದ್ದರಾಮಯ್ಯ ಪರ ಕುರುಬರು, ಡಿ.ಕೆ.ಶಿವಕುಮಾರ್ ಅವರ ಪರ ಒಕ್ಕಲಿಗರು ಸಭೆ ನಡೆಸಿ ಬ್ಯಾಟ್ ಬೀಸಿದ್ದಾರೆ.
ಭಾನುವಾರ ವಿಜಯನಗರದ ಶಾಖಾ ಮಠದಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮೀಜಿ ಸೇರಿದಂತೆ ವಿವಿಧ ಒಕ್ಕಲಿಗ ಮಠಾಧೀಶರು, ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಸಮುದಾಯದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಿವೃತ್ತ ಅಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್ ಅವರ ಪಾತ್ರ ದೊಡ್ಡದಿದ್ದು, ಹಾಗಾಗಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಲು ಹಾಗೂ ಹೈಕಮಾಂಡ್ ಮೇಲೆ ಒತ್ತಡ ತರಲು ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರು ಕೂಡ ಹಾಜರಿದ್ದರು.
ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗುವುದು ಸಂಪ್ರದಾಯ: ‘ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಕಾಂಗ್ರೆಸ್ನಲ್ಲಿ ಸಂಪ್ರದಾಯದಂತೆ ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗುತ್ತಾರೆ. ಆದ್ದರಿಂದ ಡಿ.ಕೆ.ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಭಾವಿಸಿದ್ದೇನೆ’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಅವರು, ‘ಎಲ್ಲ ಮಾನದಂಡಗಳಿಂದಲೂ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿರುವುದರಿಂದ ಅವರು ಕೂಡ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಎನ್ನುವುದು ನಮ್ಮ ಆಶಯ ಕೂಡ ಆಗಿದೆ’ ಎಂದು ಹೇಳಿದರು. ನಂಜಾವಧೂತ ಸ್ವಾಮೀಜಿ ಮಾತನಾಡಿ, ‘ನನ್ನ ಕೈಗೂ ಪೆನ್ನು(ಅಧಿಕಾರ) ಕೊಟ್ಟು ನೋಡಿ’ ಎಂದು ಸಮುದಾಯದ ಹಲವು ಸಭೆಗಳಲ್ಲಿ ಶಿವಕುಮಾರ್ ಮನವಿ ಮಾಡಿಕೊಂಡಿದ್ದಾರೆ. ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದಂತೆ ಶಿವಕುಮಾರ್ ಅವರಿಗೂ ಸಮುದಾಯ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.
ಸಿದ್ದು ಪರ ಕುರುಬ ಸಂಘದ ಸಭೆ : ಮತ್ತೊಂದೆಡೆ ಬೆಂಗಳೂರಿನ ಕುರುಬರ ಸಂಘದಲ್ಲಿ ಭಾನುವಾರ ಕುರುಬ ಜನಾಂಗದ ಹಲವು ಮುಖಂಡರು ಸಭೆ ನಡೆಸಿದ್ದು ಸಿದ್ದರಾಮಯ್ಯ ಅವರನ್ನೇ ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್ ವರಿಷ್ಠರು ಮತ್ತು ಹೈಕಮಾಂಡ್ ನಾಯಕರ ಮೇಲೆ ಒತ್ತಡ ತರಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಕುರುಬ ಸಮಾಜದ ಪ್ರಭಾರಿ ಅಧ್ಯಕ್ಷ ಸುಬ್ರಹ್ಮಣ್ಯ, ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಎಂ.ಶಿವರಾಜು, ಮಾಜಿ ಮೇಯರ್ ವೆಂಕಟೇಶ್ ಮೂರ್ತಿ, ನಾಗರಾಜ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…
ಇತ್ತೀಚಿನ ದಿನಗಳಲ್ಲಿ, ಟೂತ್ ಪೇಸ್ಟ್ಗಳಲ್ಲಿ ತಂಬಾಕು ಮತ್ತು ನಿಕೋಟಿನ್ ಅಂಶ ಪತ್ತೆಯಾಗಿದ್ದು, ಇದರ ಸೇವನೆಯಿಂದ ಹಲವು ಮಕ್ಕಳು ತೊಂದರೆಗೊಳಗಾಗಿರುವ ಘಟನೆಗಳು…
ಮೈಸೂರಿನ ಕುವೆಂಪುನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ರಸ್ತೆ, ಗದ್ದಿಗೆ ರಸ್ತೆ, ವಿಶ್ವಮಾನವ ಜೋಡಿ ರಸ್ತೆ, ವಿದ್ಯಾರಣ್ಯಪುರಂ -…
ಆಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಾಲ್ಕು ವರ್ಷಗಳ ಹಿಂದೆ ಜಾರಿಗೆ ತಂದ ನೂತನ ಶಿಕ್ಷಣ ನೀತಿಯನ್ನು ಪರಿಣಾಮಕಾರಿಯಾಗಿ…
ತಿ.ನರಸೀಪುರ : ಬೈಕ್ ಗೆ ಎದುರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿಯಾದ ಪರಿಣಾಮ ಯುವಕನೋರ್ವ ಸ್ಥಳದಲ್ಲಿಯೇ ಮೃತಪಟ್ಟಿ ಘಟನೆ ತಾಲೂಕಿನ…