BREAKING NEWS

ಸಿಎಂ ಹುದ್ದೆ : ಡಿಕೆಶಿ ಪರ ಒಕ್ಕಲಿಗರು, ಸಿದ್ದು ಪರ ಕುರುಬರ ಲಾಬಿ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಅವರ ನಡುವೆ ಪೈಪೋಟಿ ತೀವ್ರಗೊಂಡಿರುವ ನಡುವೆಯೇ ಇಬ್ಬರೂ ನಾಯಕರ ಪರ ಆಯಾ ಸಮುದಾಯಗಳ ನಡುವೆ ಜಾತಿ ರಾಜಕಾರಣ ಶುರುವಾಗಿದೆ. ಸಿದ್ದರಾಮಯ್ಯ ಪರ ಕುರುಬರು, ಡಿ.ಕೆ.ಶಿವಕುಮಾರ್‌ ಅವರ ಪರ ಒಕ್ಕಲಿಗರು ಸಭೆ ನಡೆಸಿ ಬ್ಯಾಟ್‌ ಬೀಸಿದ್ದಾರೆ.

ಭಾನುವಾರ ವಿಜಯನಗರದ ಶಾಖಾ ಮಠದಲ್ಲಿ ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸ್ಫಟಿಕಪುರಿ ಸಂಸ್ಥಾನದ ನಂಜಾವಧೂತ ಸ್ವಾಮೀಜಿ ಸೇರಿದಂತೆ ವಿವಿಧ ಒಕ್ಕಲಿಗ ಮಠಾಧೀಶರು, ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು, ಸಮುದಾಯದ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನಿವೃತ್ತ ಅಧಿಕಾರಿಗಳ ಸಭೆಯಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಲು ಡಿ.ಕೆ.ಶಿವಕುಮಾರ್‌ ಅವರ ಪಾತ್ರ ದೊಡ್ಡದಿದ್ದು, ಹಾಗಾಗಿ ಅವರನ್ನೇ ಮುಖ್ಯಮಂತ್ರಿ ಮಾಡಬೇಕೆಂದು ಆಗ್ರಹಿಸಲು ಹಾಗೂ ಹೈಕಮಾಂಡ್‌ ಮೇಲೆ ಒತ್ತಡ ತರಲು ತೀರ್ಮಾನಿಸಿದ್ದಾರೆ. ಸಭೆಯಲ್ಲಿ ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರು ಕೂಡ ಹಾಜರಿದ್ದರು.

ಕೆಪಿಸಿಸಿ ಅಧ್ಯಕ್ಷರೇ ಸಿಎಂ ಆಗುವುದು ಸಂಪ್ರದಾಯ: ‘ಡಿ.ಕೆ. ಶಿವಕುಮಾರ್‌ ಅವರು ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಕಾಂಗ್ರೆಸ್‌ನಲ್ಲಿ ಸಂಪ್ರದಾಯದಂತೆ ಕೆಪಿಸಿಸಿ ಅಧ್ಯಕ್ಷರೇ ಮುಖ್ಯಮಂತ್ರಿ ಆಗುತ್ತಾರೆ. ಆದ್ದರಿಂದ ಡಿ.ಕೆ.ಶಿವಕುಮಾರ್‌ ಅವರನ್ನೇ ಮುಖ್ಯಮಂತ್ರಿ ಮಾಡುತ್ತಾರೆ ಎಂದು ಭಾವಿಸಿದ್ದೇನೆ’ ಎಂದು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದಾರೆ.

ಸಭೆಯ ಬಳಿಕ ಮಾತನಾಡಿದ ಅವರು, ‘ಎಲ್ಲ ಮಾನದಂಡಗಳಿಂದಲೂ ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿರುವುದರಿಂದ ಅವರು ಕೂಡ ಈ ರಾಜ್ಯದ ಮುಖ್ಯಮಂತ್ರಿ ಆಗಲಿ ಎನ್ನುವುದು ನಮ್ಮ ಆಶಯ ಕೂಡ ಆಗಿದೆ’ ಎಂದು ಹೇಳಿದರು. ನಂಜಾವಧೂತ ಸ್ವಾಮೀಜಿ ಮಾತನಾಡಿ, ‘ನನ್ನ ಕೈಗೂ ಪೆನ್ನು(ಅಧಿಕಾರ) ಕೊಟ್ಟು ನೋಡಿ’ ಎಂದು ಸಮುದಾಯದ ಹಲವು ಸಭೆಗಳಲ್ಲಿ ಶಿವಕುಮಾರ್‌ ಮನವಿ ಮಾಡಿಕೊಂಡಿದ್ದಾರೆ. ಎಚ್‌.ಡಿ.ದೇವೇಗೌಡ, ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಬೆಂಬಲ ನೀಡಿದಂತೆ ಶಿವಕುಮಾರ್‌ ಅವರಿಗೂ ಸಮುದಾಯ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.

ಸಿದ್ದು ಪರ ಕುರುಬ ಸಂಘದ ಸಭೆ : ಮತ್ತೊಂದೆಡೆ ಬೆಂಗಳೂರಿನ ಕುರುಬರ ಸಂಘದಲ್ಲಿ ಭಾನುವಾರ ಕುರುಬ ಜನಾಂಗದ ಹಲವು ಮುಖಂಡರು ಸಭೆ ನಡೆಸಿದ್ದು ಸಿದ್ದರಾಮಯ್ಯ ಅವರನ್ನೇ ಮತ್ತೆ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಬೇಕೆಂದು ಕಾಂಗ್ರೆಸ್‌ ವರಿಷ್ಠರು ಮತ್ತು ಹೈಕಮಾಂಡ್‌ ನಾಯಕರ ಮೇಲೆ ಒತ್ತಡ ತರಲು ನಿರ್ಧರಿಸಿದ್ದಾರೆ. ಸಭೆಯಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ಕುರುಬ ಸಮಾಜದ ಪ್ರಭಾರಿ ಅಧ್ಯಕ್ಷ ಸುಬ್ರಹ್ಮಣ್ಯ, ಬಿಬಿಎಂಪಿ ಮಾಜಿ ವಿಪಕ್ಷ ನಾಯಕ ಎಂ.ಶಿವರಾಜು, ಮಾಜಿ ಮೇಯರ್‌ ವೆಂಕಟೇಶ್‌ ಮೂರ್ತಿ, ನಾಗರಾಜ್‌ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿ ಸಿದ್ದರಾಮಯ್ಯ ಅವರ ಪರವಾಗಿ ಬ್ಯಾಟ್‌ ಬೀಸಿದ್ದಾರೆ. 

lokesh

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

52 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

54 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

56 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

58 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

1 hour ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

1 hour ago