ಬೆಂಗಳೂರು: ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಇಂದು ಭರ್ಜರಿ ಪ್ರಚಾರ ನಡೆಸಿದ್ದರು.
ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡಿದ್ರು.
ಈ ವೇಳೆ ಭದ್ರತಾ ವೈಫಲ್ಯವಾಗಿದೆ. ಭೈರಸಂದ್ರದಲ್ಲಿ ಸಿಎಂ ಪ್ರಚಾರ ಮಾಡುತ್ತಿರುವಾಗ ವ್ಯಕ್ತಿಯೊಬ್ಬ ತನ್ನ ಸೊಂಟಕ್ಕೆ ಗನ್ ಸಿಕ್ಕಿಸಿಕೊಂಡು, ಸಿಎಂ ಇದ್ದ ವಾಹನ ಏರಿದ್ದಾನೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದಾನೆ. ಈ ವೇಳೆ ಆತನ ಸೊಂಟದಲ್ಲಿ ಗನ್ ಇರುವುದು ಕಂಡು ಬಂದಿದೆ.





