Mysore
21
overcast clouds
Light
Dark

ಸಿಎಂ ಭದ್ರತಾ ವೈಪಲ್ಯ : ಸಿಎಂಗೆ ಹಾರಹಾಕಿದ ವ್ಯಕ್ತಿ ಸೊಂಟದಲ್ಲಿ ಗನ್‌ !

ಬೆಂಗಳೂರು:  ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಇಂದು  ಭರ್ಜರಿ ಪ್ರಚಾರ ನಡೆಸಿದ್ದರು.

ಕಾಂಗ್ರೆಸ್ ಅಭ್ಯರ್ಥಿ  ಸೌಮ್ಯಾ ರೆಡ್ಡಿ  ಹಾಗೂ ಬೆಂಗಳೂರು ಕೇಂದ್ರ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ ಪರ ಸಿಎಂ ಮತಯಾಚನೆ ಮಾಡಿದ್ರು.

ಈ ವೇಳೆ ಭದ್ರತಾ ವೈಫಲ್ಯವಾಗಿದೆ. ಭೈರಸಂದ್ರದಲ್ಲಿ ಸಿಎಂ ಪ್ರಚಾರ ಮಾಡುತ್ತಿರುವಾಗ ವ್ಯಕ್ತಿಯೊಬ್ಬ ತನ್ನ ಸೊಂಟಕ್ಕೆ ಗನ್ ಸಿಕ್ಕಿಸಿಕೊಂಡು, ಸಿಎಂ ಇದ್ದ ವಾಹನ ಏರಿದ್ದಾನೆ. ಬಳಿಕ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿದ್ದಾನೆ. ಈ ವೇಳೆ ಆತನ ಸೊಂಟದಲ್ಲಿ ಗನ್ ಇರುವುದು ಕಂಡು ಬಂದಿದೆ.