BREAKING NEWS

ಕಲ್ಲಿದ್ದಲು ಹಗರಣ: ಮಾಜಿ ಸಂಸದ ವಿಜಯ್ ದರ್ದಾ, ಮಾಜಿ ಕಾರ್ಯದರ್ಶಿ ಎಚ್‌ಸಿ ಗುಪ್ತಾ ದೋಷಿ

ನವದೆಹಲಿ: ಛತ್ತೀಸ್‌ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್‌ಸಿ ಗುಪ್ತಾ ಸೇರಿದಂತೆ ಏಳು ಆರೋಪಿಗಳು ತಪ್ಪಿತಸ್ಥರು ಎಂದು ದೆಹಲಿ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ.

ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಸಂಜಯ್ ಬನ್ಸಾಲ್ ಅವರು, ಆರೋಪಿಗಳಾದ ದರ್ದಾ ಹಾಗೂ ಪುತ್ರ ದೇವೆಂದರ್ ದರ್ದಾ, ಇಬ್ಬರು ಹಿರಿಯ ಅಧಿಕಾರಿಗಳಾದ ಕೆ ಎಸ್ ಕ್ರೋಫಾ ಮತ್ತು ಕೆ ಸಿ ಸಮ್ರಿಯಾ, ಜೆಎಲ್‌ಡಿ ಯವತ್ಮಲ್ ಎನರ್ಜಿ ಪ್ರೈವೇಟ್ ಲಿಮಿಟೆಡ್ ಮತ್ತು ಅದರ ನಿರ್ದೇಶಕ ಮನೋಜ್ ಕುಮಾರ್ ಜಯಸ್ವಾಲ್ ಅವರನ್ನೂ ದೋಷಿಗಳೆಂದು ತೀರ್ಪು ನೀಡಿದ್ದಾರೆ.

ನ್ಯಾಯಾಧೀಶ ಸಂಜಯ್ ಬನ್ಸಾಲ್ ಅವರು ಶಿಕ್ಷೆಯ ಪ್ರಮಾಣವನ್ನು ಜುಲೈ 18ಕ್ಕೆ ಕಾಯ್ದಿರಿಸಿದ್ದಾರೆ.

ಸಿಬಿಐ ತನ್ನ ಪ್ರಕರಣವನ್ನು ಎಲ್ಲಾ ಅನುಮಾನಗಳನ್ನು ಮೀರಿ ಆರೋಪ ಸಾಬೀತುಪಡಿಸಲು ಸಮರ್ಥವಾಗಿದೆ ಎಂದು ಹಿರಿಯ ಪಬ್ಲಿಕ್ ಪ್ರಾಸಿಕ್ಯೂಟರ್ ಎ ಪಿ ಸಿಂಗ್ ಸಲ್ಲಿಸಿದ ವಾದವನ್ನು ನ್ಯಾಯಾಲಯ ಒಪ್ಪಿಕೊಂಡಿದೆ.

ನವೆಂಬರ್ 20, 2014 ರಂದು, ಪ್ರಕರಣದಲ್ಲಿ ಸಿಬಿಐ ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಸ್ವೀಕರಿಸಲು ನಿರಾಕರಿಸಿದ್ದ ಕೋರ್ಟ್, ಮಾಜಿ ಸಂಸದ ದರ್ದಾ ಅವರು ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ “ತಪ್ಪು ಮಾಹಿತಿ” ನೀಡಿದ್ದಾರೆ ಎಂದು ಹೇಳಿ, ಹೆಚ್ಚಿನ ತನಿಖೆ ನಡೆಸುವಂತೆ ಸೂಚಿಸಿತ್ತು.

andolanait

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

15 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

15 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

15 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

15 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

15 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

15 hours ago