BREAKING NEWS

ಮುಂಬೈ ವಿಮಾನ ನಿಲ್ದಾಣದಲ್ಲಿ 70 ಕೋಟಿ ಮೌಲ್ಯದ ಕೊಕೇನ್ ವಶ

ಮುಂಬೈ : ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕವಸ್ತು ಕಳ್ಳಸಾಗಣೆ ಜಾಲ ವಿಫಲಗೊಳಿಸಿರುವ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‍ಐ) ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ನಾಲ್ವರನ್ನು ಬಂಧಿಸಿ ಮೂಲಕ 70 ಕೋಟಿ ರೂಪಾಯಿ ಮೌಲ್ಯದ 7 ಕೆಜಿ ಕೊಕೇನ್ ವಶಪಡಿಸಿಕೊಂಡಿದೆ.

ಆರೋಪಿಗಳಲ್ಲಿ ಒಬ್ಬನಿಂದ ಐದು ಗುಂಡುಗಳೊಂದಿಗೆ ಬಂದೂಕನ್ನುವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದೆರಡು ದಿನಗಳಲ್ಲಿ ನಾಲ್ಕು ಘಟನೆಗಳು ವರದಿಯಾಗಿವೆ. ಬಂಧಿತ ನಾಲ್ವರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ ಎಂದು ಅವರು ಹೇಳಿದ್ದಾರೆ.

ಮಾದಕ ಕೊಕೇನ್ ಅನ್ನು ತಮ್ಮ ಟ್ರಾಲಿ ಬ್ಯಾಗ್‍ಗಳ ಸುಳ್ಳು ಕುಳಿಗಳಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದ ಇಬ್ಬರನ್ನು ಬಂಸಿದೆ ಎಂದು ಅವರು ಹೇಳಿದರು.ಇದಲ್ಲದೆ ಪ್ರತ್ಯೇಕ ಘಟನೆಯಲ್ಲಿ ಇಬ್ಬರು (ಕೊಕೇನ್) ಡ್ರಗ್ ಕ್ಯಾಪ್ಸುಲ್‍ಗಳನ್ನು ನುಂಗಿರುವುದು ಕಂಡುಬಂದಿದೆ. ಅವರನ್ನು ಸರ್ಕಾರಿ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕ್ಯಾಪ್ಸೂಲ್‍ಗಳನ್ನು ಹೊರತೆಗೆಯಲಾಗಿದೆ ಎಂದು ನೈರೋಬಿಯಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂದು ಮೂಲಗಳು ತಿಳಿಸಿವೆ.

ಮುಂಬೈ ಘಟಕದ ಡಿಆರ್‍ಐ ಅಧಿಕಾರಿಗಳು ನೆರೆಯ ಪಾಲ್ಘರ್ ಜಿಲ್ಲೆಯ ವಿರಾರ್‍ನಲ್ಲಿ ಮನೆಯೊಂದರ ಮೇಲೂ ದಾಳಿ ಮಾಡಿ ಮಾದಕ ದ್ರವ್ಯಗಳನ್ನು (ಕೊಕೇನ್) ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ,

andolanait

Recent Posts

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

8 mins ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

48 mins ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

1 hour ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

1 hour ago

ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆಗೆ ಜಿಐಎಸ್ ಆಧಾರಿತ ಆಪ್ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಗ್ರಾಮೀಣ ಜಲ ಆಸ್ತಿಗಳ ವೈಜ್ಞಾನಿಕ ನಿರ್ವಹಣೆ ಮತ್ತು ನಕಲಿ ಬಿಲ್ ಗಳಿಗೆ ಕಡಿವಾಣ ಹಾಕಲು ಭೌಗೋಳಿಕ ಮಾಹಿತಿ…

2 hours ago

ಕೆಆರ್‌ಎಸ್‌ ಜಲಾಶಯಕ್ಕೆ ಮತ್ತಷ್ಟು ಹೆಚ್ಚಾದ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…

6 hours ago