ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ಮಸ್ಕಿಯ ರಮೇಶ್(40), ರಾಯಚೂರಿನ ಮಾಬಮ್ಮ, ಮಾನ್ವಿಯ ನರಸಣ್ಣ ಎಂದು ಗುರುತಿಸಲಾಗಿದೆ. ಇನ್ನೂ ಒಬ್ಬರ ಗುರುತು ಪತ್ತೆಯಾಗಿಲ್ಲ.
ಗಾಯಗೊಂಡ ಎಂಟು ಜನರಲ್ಲಿ ಐವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರಿಗೆ ಚಳ್ಳಕೆರೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಯಾಣಿಕರ ಪ್ರಕಾರ, ಕೆಎಸ್ಆರ್ಟಿಸಿ ಚಾಲಕ ಅತಿವೇಗ ಮತ್ತು ನಿರ್ಲಕ್ಷತನದಿಂದ ಬಸ್ಸನ್ನು ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿ ಹಿಂದಿಕ್ಕಲು ಯತ್ನಿಸಿದ ವೇಳೆ ಅಪಘಾತ ಸಂಭವಿಸಿದೆ, ಬಸ್ಸಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ.
ಡಿಕ್ಕಿಯ ರಭಸಕ್ಕೆ ಬಸ್ ನ ಮುಂದಿನ ಸೀಟುಗಳಲ್ಲಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹಿರಿಯೂರು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…