ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲೂಕು ಕೇಂದ್ರದಿಂದ ಹಿರಿಯೂರಿಗೆ ಸಾಗುವ, ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ.
ಮೃತರನ್ನು ಬೆಂಗಳೂರು ಮೂಲದ ಪಾರ್ವತಮ್ಮ(45), ಮಸ್ಕಿಯ ರಮೇಶ್(40), ರಾಯಚೂರಿನ ಮಾಬಮ್ಮ, ಮಾನ್ವಿಯ ನರಸಣ್ಣ ಎಂದು ಗುರುತಿಸಲಾಗಿದೆ. ಇನ್ನೂ ಒಬ್ಬರ ಗುರುತು ಪತ್ತೆಯಾಗಿಲ್ಲ.
ಗಾಯಗೊಂಡ ಎಂಟು ಜನರಲ್ಲಿ ಐವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರಿಗೆ ಚಳ್ಳಕೆರೆ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರಯಾಣಿಕರ ಪ್ರಕಾರ, ಕೆಎಸ್ಆರ್ಟಿಸಿ ಚಾಲಕ ಅತಿವೇಗ ಮತ್ತು ನಿರ್ಲಕ್ಷತನದಿಂದ ಬಸ್ಸನ್ನು ಚಲಾಯಿಸುತ್ತಿದ್ದ ಎಂದು ತಿಳಿದು ಬಂದಿದೆ. ನಿಧಾನವಾಗಿ ಚಲಿಸುತ್ತಿದ್ದ ಲಾರಿ ಹಿಂದಿಕ್ಕಲು ಯತ್ನಿಸಿದ ವೇಳೆ ಅಪಘಾತ ಸಂಭವಿಸಿದೆ, ಬಸ್ಸಿನ ಎಡಭಾಗ ಸಂಪೂರ್ಣ ಜಖಂಗೊಂಡಿದೆ.
ಡಿಕ್ಕಿಯ ರಭಸಕ್ಕೆ ಬಸ್ ನ ಮುಂದಿನ ಸೀಟುಗಳಲ್ಲಿ ಕುಳಿತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹಿರಿಯೂರು ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…