BREAKING NEWS

ವಾಣಿಜ್ಯ ಬಳಕೆ ಗ್ಯಾಸ್‌ ಸಿಲಿಂಡರ್‌ ದರ ಮತ್ತೆ ಇಳಿಕೆ : ₹83.50 ಕಡಿತ

ಹೊಸದಿಲ್ಲಿ : ಸಾರ್ವಜನಿಕ ರಂಗದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಗುರುವಾರ ಇಳಿಕೆ ಮಾಡಿವೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತೀಚಿನ ದರ ಪರಿಷ್ಕರಣೆಯ ನಂತರ ಹೊಸದಿಲ್ಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆ 83.50 ರೂ. ಇಳಿಕೆಯಾಗಿದ್ದು ಸಿಲಿಂಡರ್‌ಗೆ 1,773 ರೂ.ಗೆ ಇಳಿದಿದೆ. ಈ ಹಿಂದೆ ಪ್ರತಿ ಸಿಲಿಂಡರ್‌ ದರ 1,856.50 ರೂ. ಇತ್ತು.

ಕೋಲ್ಕತ್ತಾದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ಗಳ ಬೆಲೆ ಈಗ 1875.50 ರೂ.ಗೆ ಇಳಿದಿದೆ. ಮುಂಬೈನಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ 1,725 ರೂ.ಗೆ ಇಳಿಕೆಯಾಗಿದ್ದರೆ, ಚೆನ್ನೈನಲ್ಲಿ ಸದ್ಯ 19 ಕೆಜಿ ತೂಕದ ಸಿಲಿಂಡರ್‌ಗೆ 1937 ರೂ. ದರ ಇದೆ.

ವಾಣಿಜ್ಯ ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಇಂದಿನಿಂದಲೇ ಅಂದರೆ ಜೂನ್‌ 1ರಿಂದಲೇ ಹೊಸ ದರಗಳು ಅನ್ವಯವಾಗಲಿವೆ.
ತೈಲ ಮಾರುಕಟ್ಟೆ ಕಂಪನಿಗಳು ಮೇ ತಿಂಗಳಲ್ಲಿ ಕೊನೆಯ ಬಾರಿಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ಬದಲಾಯಿಸಿದ್ದವು. ಈ ವೇಳೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 171.50 ರೂಪಾಯಿ ಕಡಿತಗೊಳಿಸಿದ್ದವು. ಇದಕ್ಕೂ ಮೊದಲು ಮಾರ್ಚ್‌ನಲ್ಲಿ ಇದೇ ಗ್ಯಾಸ್‌ ಸಿಲಿಂಡರ್‌ಗಳ ದರವನ್ನು ಮಾರ್ಚ್‌ನಲ್ಲಿ 350.50 ರೂ.ನಷ್ಟು ಏರಿಕೆ ಮಾಡಲಾಗಿತ್ತು.

ಆದರೆ ಮನೆಗಳಲ್ಲಿ ಅಡುಗೆಗೆ ಬಳಕೆ ಮಾಡುವ 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್‌ ದರ ಹಲವು ಸಮಯದಿಂದ ಗರಿಷ್ಠ ಮಟ್ಟದಲ್ಲೇ ಇದ್ದು, ಮಾರ್ಚ್‌ನಲ್ಲಿ ಪ್ರತಿ ಸಿಲಿಂಡರ್‌ ದರವನ್ನು 50 ರೂ. ಏರಿಕೆ ಮಾಡಲಾಗಿತ್ತು. ಇದರಲ್ಲಿ ಯಾವುದೇ ಇಳಿಕೆ ಆಗಿಲ್ಲ. ಪ್ರಸ್ತುತ, ಹೊಸದಿಲ್ಲಿಯಲ್ಲಿ ಗೃಹಬಳಕೆಯ ಅಡುಗೆ ಅನಿಲದ ಬೆಲೆ 14.2 ಕೆಜಿ ಸಿಲಿಂಡರ್‌ಗೆ 1,003 ರೂ. ಇದೆ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ 1,029 ರೂ., 1,002.5 ರೂ. ಮತ್ತು 1,018.5 ರೂ. ಇದೆ.

ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್‌ ಖರೀದಿಸಲು ಗ್ರಾಹಕರು 1105.50 ರೂ. ಪಾವತಿಸಬೇಕಿದೆ.

lokesh

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago