ಹೊಸದಿಲ್ಲಿ : ಸಾರ್ವಜನಿಕ ರಂಗದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು ಗುರುವಾರ ಇಳಿಕೆ ಮಾಡಿವೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತೀಚಿನ ದರ ಪರಿಷ್ಕರಣೆಯ ನಂತರ ಹೊಸದಿಲ್ಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್ಪಿಜಿ ಸಿಲಿಂಡರ್ ಬೆಲೆ 83.50 ರೂ. ಇಳಿಕೆಯಾಗಿದ್ದು ಸಿಲಿಂಡರ್ಗೆ 1,773 ರೂ.ಗೆ ಇಳಿದಿದೆ. ಈ ಹಿಂದೆ ಪ್ರತಿ ಸಿಲಿಂಡರ್ ದರ 1,856.50 ರೂ. ಇತ್ತು.
ಕೋಲ್ಕತ್ತಾದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ಗಳ ಬೆಲೆ ಈಗ 1875.50 ರೂ.ಗೆ ಇಳಿದಿದೆ. ಮುಂಬೈನಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ 1,725 ರೂ.ಗೆ ಇಳಿಕೆಯಾಗಿದ್ದರೆ, ಚೆನ್ನೈನಲ್ಲಿ ಸದ್ಯ 19 ಕೆಜಿ ತೂಕದ ಸಿಲಿಂಡರ್ಗೆ 1937 ರೂ. ದರ ಇದೆ.
ವಾಣಿಜ್ಯ ಮತ್ತು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಇಂದಿನಿಂದಲೇ ಅಂದರೆ ಜೂನ್ 1ರಿಂದಲೇ ಹೊಸ ದರಗಳು ಅನ್ವಯವಾಗಲಿವೆ.
ತೈಲ ಮಾರುಕಟ್ಟೆ ಕಂಪನಿಗಳು ಮೇ ತಿಂಗಳಲ್ಲಿ ಕೊನೆಯ ಬಾರಿಗೆ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ದರವನ್ನು ಬದಲಾಯಿಸಿದ್ದವು. ಈ ವೇಳೆ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಯನ್ನು 171.50 ರೂಪಾಯಿ ಕಡಿತಗೊಳಿಸಿದ್ದವು. ಇದಕ್ಕೂ ಮೊದಲು ಮಾರ್ಚ್ನಲ್ಲಿ ಇದೇ ಗ್ಯಾಸ್ ಸಿಲಿಂಡರ್ಗಳ ದರವನ್ನು ಮಾರ್ಚ್ನಲ್ಲಿ 350.50 ರೂ.ನಷ್ಟು ಏರಿಕೆ ಮಾಡಲಾಗಿತ್ತು.
ಆದರೆ ಮನೆಗಳಲ್ಲಿ ಅಡುಗೆಗೆ ಬಳಕೆ ಮಾಡುವ 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ದರ ಹಲವು ಸಮಯದಿಂದ ಗರಿಷ್ಠ ಮಟ್ಟದಲ್ಲೇ ಇದ್ದು, ಮಾರ್ಚ್ನಲ್ಲಿ ಪ್ರತಿ ಸಿಲಿಂಡರ್ ದರವನ್ನು 50 ರೂ. ಏರಿಕೆ ಮಾಡಲಾಗಿತ್ತು. ಇದರಲ್ಲಿ ಯಾವುದೇ ಇಳಿಕೆ ಆಗಿಲ್ಲ. ಪ್ರಸ್ತುತ, ಹೊಸದಿಲ್ಲಿಯಲ್ಲಿ ಗೃಹಬಳಕೆಯ ಅಡುಗೆ ಅನಿಲದ ಬೆಲೆ 14.2 ಕೆಜಿ ಸಿಲಿಂಡರ್ಗೆ 1,003 ರೂ. ಇದೆ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ 1,029 ರೂ., 1,002.5 ರೂ. ಮತ್ತು 1,018.5 ರೂ. ಇದೆ.
ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಖರೀದಿಸಲು ಗ್ರಾಹಕರು 1105.50 ರೂ. ಪಾವತಿಸಬೇಕಿದೆ.
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…
ದಿಸ್ಪುರ್: ನೆರೆಯ ರಾಜ್ಯ ಅರುಣಾಚಲ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಭೀಕರ ಪ್ರವಾಹ ಸೃಷ್ಟಿಯಾಗಿದೆ. ಭಾರೀ…
ಎಚ್.ಡಿ.ಕೋಟೆ: ಈ ಬಾರಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರಾಜ್ಯದ ಜಲಾಶಯಗಳು ಬರಿದಾಗುತ್ತಿವೆ. ರಾಜ್ಯದಲ್ಲಿ ಮೊದಲು ಭರ್ತಿಯಾಗುವ ಜಲಾಶಯ ಎಂಬ…
ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…