BREAKING NEWS

ವಾಣಿಜ್ಯ ಬಳಕೆ ಗ್ಯಾಸ್‌ ಸಿಲಿಂಡರ್‌ ದರ ಮತ್ತೆ ಇಳಿಕೆ : ₹83.50 ಕಡಿತ

ಹೊಸದಿಲ್ಲಿ : ಸಾರ್ವಜನಿಕ ರಂಗದ ತೈಲ ಮಾರಾಟ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಗುರುವಾರ ಇಳಿಕೆ ಮಾಡಿವೆ. ಆದರೆ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇತ್ತೀಚಿನ ದರ ಪರಿಷ್ಕರಣೆಯ ನಂತರ ಹೊಸದಿಲ್ಲಿಯಲ್ಲಿ ವಾಣಿಜ್ಯ ಬಳಕೆಯ 19 ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ ಬೆಲೆ 83.50 ರೂ. ಇಳಿಕೆಯಾಗಿದ್ದು ಸಿಲಿಂಡರ್‌ಗೆ 1,773 ರೂ.ಗೆ ಇಳಿದಿದೆ. ಈ ಹಿಂದೆ ಪ್ರತಿ ಸಿಲಿಂಡರ್‌ ದರ 1,856.50 ರೂ. ಇತ್ತು.

ಕೋಲ್ಕತ್ತಾದಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್‌ ಸಿಲಿಂಡರ್‌ಗಳ ಬೆಲೆ ಈಗ 1875.50 ರೂ.ಗೆ ಇಳಿದಿದೆ. ಮುಂಬೈನಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ 1,725 ರೂ.ಗೆ ಇಳಿಕೆಯಾಗಿದ್ದರೆ, ಚೆನ್ನೈನಲ್ಲಿ ಸದ್ಯ 19 ಕೆಜಿ ತೂಕದ ಸಿಲಿಂಡರ್‌ಗೆ 1937 ರೂ. ದರ ಇದೆ.

ವಾಣಿಜ್ಯ ಮತ್ತು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಗಳನ್ನು ಪ್ರತಿ ತಿಂಗಳ ಮೊದಲ ದಿನದಂದು ಪರಿಷ್ಕರಿಸಲಾಗುತ್ತದೆ. ಇಂದಿನಿಂದಲೇ ಅಂದರೆ ಜೂನ್‌ 1ರಿಂದಲೇ ಹೊಸ ದರಗಳು ಅನ್ವಯವಾಗಲಿವೆ.
ತೈಲ ಮಾರುಕಟ್ಟೆ ಕಂಪನಿಗಳು ಮೇ ತಿಂಗಳಲ್ಲಿ ಕೊನೆಯ ಬಾರಿಗೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ದರವನ್ನು ಬದಲಾಯಿಸಿದ್ದವು. ಈ ವೇಳೆ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 171.50 ರೂಪಾಯಿ ಕಡಿತಗೊಳಿಸಿದ್ದವು. ಇದಕ್ಕೂ ಮೊದಲು ಮಾರ್ಚ್‌ನಲ್ಲಿ ಇದೇ ಗ್ಯಾಸ್‌ ಸಿಲಿಂಡರ್‌ಗಳ ದರವನ್ನು ಮಾರ್ಚ್‌ನಲ್ಲಿ 350.50 ರೂ.ನಷ್ಟು ಏರಿಕೆ ಮಾಡಲಾಗಿತ್ತು.

ಆದರೆ ಮನೆಗಳಲ್ಲಿ ಅಡುಗೆಗೆ ಬಳಕೆ ಮಾಡುವ 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್‌ ದರ ಹಲವು ಸಮಯದಿಂದ ಗರಿಷ್ಠ ಮಟ್ಟದಲ್ಲೇ ಇದ್ದು, ಮಾರ್ಚ್‌ನಲ್ಲಿ ಪ್ರತಿ ಸಿಲಿಂಡರ್‌ ದರವನ್ನು 50 ರೂ. ಏರಿಕೆ ಮಾಡಲಾಗಿತ್ತು. ಇದರಲ್ಲಿ ಯಾವುದೇ ಇಳಿಕೆ ಆಗಿಲ್ಲ. ಪ್ರಸ್ತುತ, ಹೊಸದಿಲ್ಲಿಯಲ್ಲಿ ಗೃಹಬಳಕೆಯ ಅಡುಗೆ ಅನಿಲದ ಬೆಲೆ 14.2 ಕೆಜಿ ಸಿಲಿಂಡರ್‌ಗೆ 1,003 ರೂ. ಇದೆ. ಕೋಲ್ಕತ್ತಾ, ಮುಂಬೈ ಮತ್ತು ಚೆನ್ನೈನಲ್ಲಿ ಕ್ರಮವಾಗಿ 1,029 ರೂ., 1,002.5 ರೂ. ಮತ್ತು 1,018.5 ರೂ. ಇದೆ.

ಬೆಂಗಳೂರಿನಲ್ಲಿ 14.2 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್‌ ಖರೀದಿಸಲು ಗ್ರಾಹಕರು 1105.50 ರೂ. ಪಾವತಿಸಬೇಕಿದೆ.

lokesh

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago