BREAKING NEWS

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಕುರಿತು ಸೂಕ್ತ ಕ್ರಮಗಳ ಸಲಹೆ ನೀಡಲು ಸಮಿತಿ ರಚಿನೆ: ರಾಜಸ್ಥಾನ ಸಿಎಂ

ಜೈಪುರ : ಕೋಟಾ ನಗರದಲ್ಲಿನ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ತಡೆಗಾಗಿ ಸಲಹಾ ಕ್ರಮಗಳನ್ನು ಸೂಚಿಸಲು ಸಮಿತಿಯೊಂದನ್ನು ರಚಿಸುವಂತೆ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಧಿಕಾರಿಗಳು ಹಾಗೂ ತರಬೇತಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ನಿರ್ದೇಶನವನ್ನು ನೀಡಿದ್ದಾರೆ. ಕೋಟಾ ನಗರದಲ್ಲಿ 12ನೇ ತರಗತಿಯ 17 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಎರಡು ವಾರಗಳ ನಂತರ ಈ ಸಭೆಯನ್ನು ನಡೆಸಲಾಗಿದೆ.

ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲದೆ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆಗಳ ಕೇಂದ್ರ ಸ್ಥಾನವಾಗಿರುವ ಕೋಟಾದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಇಂತಹ 20 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

ಸಮಿತಿಯು ತರಬೇತಿ ಸಂಸ್ಥೆಯ ಪ್ರತಿನಿಧಿಗಳನ್ನಲ್ಲದೆ ಪೋಷಕರು ಹಾಗೂ ವೈದ್ಯರನ್ನೂ ಹೊಂದಿರಬೇಕು ಎಂದು ಶುಕ್ರವಾರ ಗೆಹ್ಲೋಟ್ ಸೂಚಿಸಿದ್ದಾರೆ. ಸಮಿತಿಯು 15 ದಿನಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು ಎಂದೂ ಅವರು ನಿರ್ದೇಶಿಸಿದ್ದಾರೆ.

PTI ಸುದ್ದಿ ಸಂಸ್ಥೆಯ ಪ್ರಕಾರ, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಂಡಳಿ ಪರೀಕ್ಷೆಗಳಿಗೂ ಹಾಜರಾಗಬೇಕಿರುವುದರಿಂದ, ಅವರು ಈ ತರಬೇತಿ ಸಂಸ್ಥೆಗಳಲ್ಲೂ ನೋಂದಾಯಿಸಿಕೊಳ್ಳುವುದು ಅವರ ಪಾಲಿಗೆ ಹೆಚ್ಚುವರಿ ಹೊರೆಯಾಗಿ ಬದಲಾಗಿದೆ ಎಂದು ಗೆಹ್ಲೋಟ್ ಅಭಿಪ್ರಾಯ ಪಟ್ಟಿದ್ದಾರೆ.

“ನೀವು ಸಭೆಗೆ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ. ನೀವು ಒಂದು ರೀತಿಯಲ್ಲಿ ಅಪರಾಧವೆಸಗುತ್ತಿದ್ದೀರಿ. ಐಐಟಿ ದೇವರಿದ್ದಂತೆ ಎಂಬಂತಾಗಿದೆ. ವಿದ್ಯಾರ್ಥಿಗಳು ತರಬೇತಿಗೆ ಬಂದ ಕೂಡಲೇ ಅವರನ್ನು ನಕಲಿ ಶಾಲೆಗಳಿಗೆ ನೋಂದಾಯಿಸಲಾಗುತ್ತಿದೆ. ಇದೂ ಕೂಡಾ ಪೋಷಕರ ಪ್ರಮಾದವಾಗಿದೆ” ಎಂದು ಗೆಹ್ಲೋಟ್ ಕಿಡಿ ಕಾರಿದ್ದಾರೆ.

ವಿದ್ಯಾರ್ಥಿಗಳು ಆರು ಗಂಟೆಯ ತರಬೇತಿ ತರಗತಿಗಳು, ಹೆಚ್ಚುವರಿ ತರಗತಿಗಳು ಹಾಗೂ ವಾರದ ಪರೀಕ್ಷೆಗೆ ಹಾಜರಾಗಬೇಕಿದೆ. ಸುಧಾರಣೆ ತರಲು ಇದು ಸೂಕ್ತ ಸಮಯ. ನಾವು ಎಳೆಯ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಲಾಗುವುದಿಲ್ಲ” ಎಂದು ಅಧಿಕಾರಿಗಳಿಗೆ ಗೆಹ್ಲೋಟ್ ಎಚ್ಚರಿಕೆ ನೀಡಿದ್ದಾರೆ.

andolanait

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

49 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

56 mins ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

1 hour ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

2 hours ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

2 hours ago