BREAKING NEWS

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಕುರಿತು ಸೂಕ್ತ ಕ್ರಮಗಳ ಸಲಹೆ ನೀಡಲು ಸಮಿತಿ ರಚಿನೆ: ರಾಜಸ್ಥಾನ ಸಿಎಂ

ಜೈಪುರ : ಕೋಟಾ ನಗರದಲ್ಲಿನ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ತಡೆಗಾಗಿ ಸಲಹಾ ಕ್ರಮಗಳನ್ನು ಸೂಚಿಸಲು ಸಮಿತಿಯೊಂದನ್ನು ರಚಿಸುವಂತೆ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಧಿಕಾರಿಗಳು ಹಾಗೂ ತರಬೇತಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ನಿರ್ದೇಶನವನ್ನು ನೀಡಿದ್ದಾರೆ. ಕೋಟಾ ನಗರದಲ್ಲಿ 12ನೇ ತರಗತಿಯ 17 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಎರಡು ವಾರಗಳ ನಂತರ ಈ ಸಭೆಯನ್ನು ನಡೆಸಲಾಗಿದೆ.

ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲದೆ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆಗಳ ಕೇಂದ್ರ ಸ್ಥಾನವಾಗಿರುವ ಕೋಟಾದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಇಂತಹ 20 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

ಸಮಿತಿಯು ತರಬೇತಿ ಸಂಸ್ಥೆಯ ಪ್ರತಿನಿಧಿಗಳನ್ನಲ್ಲದೆ ಪೋಷಕರು ಹಾಗೂ ವೈದ್ಯರನ್ನೂ ಹೊಂದಿರಬೇಕು ಎಂದು ಶುಕ್ರವಾರ ಗೆಹ್ಲೋಟ್ ಸೂಚಿಸಿದ್ದಾರೆ. ಸಮಿತಿಯು 15 ದಿನಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು ಎಂದೂ ಅವರು ನಿರ್ದೇಶಿಸಿದ್ದಾರೆ.

PTI ಸುದ್ದಿ ಸಂಸ್ಥೆಯ ಪ್ರಕಾರ, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಂಡಳಿ ಪರೀಕ್ಷೆಗಳಿಗೂ ಹಾಜರಾಗಬೇಕಿರುವುದರಿಂದ, ಅವರು ಈ ತರಬೇತಿ ಸಂಸ್ಥೆಗಳಲ್ಲೂ ನೋಂದಾಯಿಸಿಕೊಳ್ಳುವುದು ಅವರ ಪಾಲಿಗೆ ಹೆಚ್ಚುವರಿ ಹೊರೆಯಾಗಿ ಬದಲಾಗಿದೆ ಎಂದು ಗೆಹ್ಲೋಟ್ ಅಭಿಪ್ರಾಯ ಪಟ್ಟಿದ್ದಾರೆ.

“ನೀವು ಸಭೆಗೆ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ. ನೀವು ಒಂದು ರೀತಿಯಲ್ಲಿ ಅಪರಾಧವೆಸಗುತ್ತಿದ್ದೀರಿ. ಐಐಟಿ ದೇವರಿದ್ದಂತೆ ಎಂಬಂತಾಗಿದೆ. ವಿದ್ಯಾರ್ಥಿಗಳು ತರಬೇತಿಗೆ ಬಂದ ಕೂಡಲೇ ಅವರನ್ನು ನಕಲಿ ಶಾಲೆಗಳಿಗೆ ನೋಂದಾಯಿಸಲಾಗುತ್ತಿದೆ. ಇದೂ ಕೂಡಾ ಪೋಷಕರ ಪ್ರಮಾದವಾಗಿದೆ” ಎಂದು ಗೆಹ್ಲೋಟ್ ಕಿಡಿ ಕಾರಿದ್ದಾರೆ.

ವಿದ್ಯಾರ್ಥಿಗಳು ಆರು ಗಂಟೆಯ ತರಬೇತಿ ತರಗತಿಗಳು, ಹೆಚ್ಚುವರಿ ತರಗತಿಗಳು ಹಾಗೂ ವಾರದ ಪರೀಕ್ಷೆಗೆ ಹಾಜರಾಗಬೇಕಿದೆ. ಸುಧಾರಣೆ ತರಲು ಇದು ಸೂಕ್ತ ಸಮಯ. ನಾವು ಎಳೆಯ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಲಾಗುವುದಿಲ್ಲ” ಎಂದು ಅಧಿಕಾರಿಗಳಿಗೆ ಗೆಹ್ಲೋಟ್ ಎಚ್ಚರಿಕೆ ನೀಡಿದ್ದಾರೆ.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

10 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

11 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

12 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago