BREAKING NEWS

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ಕುರಿತು ಸೂಕ್ತ ಕ್ರಮಗಳ ಸಲಹೆ ನೀಡಲು ಸಮಿತಿ ರಚಿನೆ: ರಾಜಸ್ಥಾನ ಸಿಎಂ

ಜೈಪುರ : ಕೋಟಾ ನಗರದಲ್ಲಿನ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆ ತಡೆಗಾಗಿ ಸಲಹಾ ಕ್ರಮಗಳನ್ನು ಸೂಚಿಸಲು ಸಮಿತಿಯೊಂದನ್ನು ರಚಿಸುವಂತೆ ಶುಕ್ರವಾರ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ ಎಂದು PTI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಧಿಕಾರಿಗಳು ಹಾಗೂ ತರಬೇತಿ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ನಿರ್ದೇಶನವನ್ನು ನೀಡಿದ್ದಾರೆ. ಕೋಟಾ ನಗರದಲ್ಲಿ 12ನೇ ತರಗತಿಯ 17 ವರ್ಷ ವಯಸ್ಸಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಎರಡು ವಾರಗಳ ನಂತರ ಈ ಸಭೆಯನ್ನು ನಡೆಸಲಾಗಿದೆ.

ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಪ್ರವೇಶ ಪರೀಕ್ಷೆಗಳಲ್ಲದೆ ನಾಗರಿಕ ಸೇವಾ ಪರೀಕ್ಷೆಗಳಿಗೆ ಸಿದ್ಧವಾಗುತ್ತಿರುವ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆಗಳ ಕೇಂದ್ರ ಸ್ಥಾನವಾಗಿರುವ ಕೋಟಾದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ಇಂತಹ 20 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿವೆ.

ಸಮಿತಿಯು ತರಬೇತಿ ಸಂಸ್ಥೆಯ ಪ್ರತಿನಿಧಿಗಳನ್ನಲ್ಲದೆ ಪೋಷಕರು ಹಾಗೂ ವೈದ್ಯರನ್ನೂ ಹೊಂದಿರಬೇಕು ಎಂದು ಶುಕ್ರವಾರ ಗೆಹ್ಲೋಟ್ ಸೂಚಿಸಿದ್ದಾರೆ. ಸಮಿತಿಯು 15 ದಿನಗಳೊಳಗೆ ತನ್ನ ವರದಿಯನ್ನು ಸಲ್ಲಿಸಬೇಕು ಎಂದೂ ಅವರು ನಿರ್ದೇಶಿಸಿದ್ದಾರೆ.

PTI ಸುದ್ದಿ ಸಂಸ್ಥೆಯ ಪ್ರಕಾರ, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಮಂಡಳಿ ಪರೀಕ್ಷೆಗಳಿಗೂ ಹಾಜರಾಗಬೇಕಿರುವುದರಿಂದ, ಅವರು ಈ ತರಬೇತಿ ಸಂಸ್ಥೆಗಳಲ್ಲೂ ನೋಂದಾಯಿಸಿಕೊಳ್ಳುವುದು ಅವರ ಪಾಲಿಗೆ ಹೆಚ್ಚುವರಿ ಹೊರೆಯಾಗಿ ಬದಲಾಗಿದೆ ಎಂದು ಗೆಹ್ಲೋಟ್ ಅಭಿಪ್ರಾಯ ಪಟ್ಟಿದ್ದಾರೆ.

“ನೀವು ಸಭೆಗೆ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳನ್ನು ಆಹ್ವಾನಿಸಿ. ನೀವು ಒಂದು ರೀತಿಯಲ್ಲಿ ಅಪರಾಧವೆಸಗುತ್ತಿದ್ದೀರಿ. ಐಐಟಿ ದೇವರಿದ್ದಂತೆ ಎಂಬಂತಾಗಿದೆ. ವಿದ್ಯಾರ್ಥಿಗಳು ತರಬೇತಿಗೆ ಬಂದ ಕೂಡಲೇ ಅವರನ್ನು ನಕಲಿ ಶಾಲೆಗಳಿಗೆ ನೋಂದಾಯಿಸಲಾಗುತ್ತಿದೆ. ಇದೂ ಕೂಡಾ ಪೋಷಕರ ಪ್ರಮಾದವಾಗಿದೆ” ಎಂದು ಗೆಹ್ಲೋಟ್ ಕಿಡಿ ಕಾರಿದ್ದಾರೆ.

ವಿದ್ಯಾರ್ಥಿಗಳು ಆರು ಗಂಟೆಯ ತರಬೇತಿ ತರಗತಿಗಳು, ಹೆಚ್ಚುವರಿ ತರಗತಿಗಳು ಹಾಗೂ ವಾರದ ಪರೀಕ್ಷೆಗೆ ಹಾಜರಾಗಬೇಕಿದೆ. ಸುಧಾರಣೆ ತರಲು ಇದು ಸೂಕ್ತ ಸಮಯ. ನಾವು ಎಳೆಯ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ನೋಡಲಾಗುವುದಿಲ್ಲ” ಎಂದು ಅಧಿಕಾರಿಗಳಿಗೆ ಗೆಹ್ಲೋಟ್ ಎಚ್ಚರಿಕೆ ನೀಡಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

14 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

14 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

14 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

17 hours ago