ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ದೂರು ವಿಚಾರವಾಗಿ ತನಿಖೆ ನಡೆಸೋಣ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.
ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಪಾಪ ಅವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ. ನಾವು ಮಂಡ್ಯದಲ್ಲಿ ಏಳಕ್ಕೆ ಆರು ಗೆದ್ದುಬಿಟ್ಟಿದ್ದೀವಲ್ಲ ಅದಕ್ಕಾಗಿ ಸಹಿಸಿಕೊಳ್ಳಲು ಆಗ್ತಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಬೇರೆ ಬೇರೆ ಆರೋಪಗಳನ್ನು ಮಾಡ್ತಿದ್ದಾರೆ. ಅದರ ಬಗ್ಗೆಯೂ ತನಿಖೆ ಮಾಡಿಸೋಣ ಎಂದು ತಿರುಗೇಟು ನೀಡಿದರು. ನನ್ನ ವಿರುದ್ಧವೂ ಮಾಜಿ ಸಚಿವ ಅಶ್ವತ್ಥ ನಾರಾಯಣ ತನಿಖೆ ಮಾಡಿಸಿ ಅಂತ ಹೇಳಿದ್ರು. ಮುನಿರತ್ನ ವಿರುದ್ಧ ಆರೋಪಗಳನ್ನು ತನಿಖೆ ಮಾಡಿಸಿ ಅಂದಿದ್ದರು. ಎಲ್ಲವನ್ನೂ ತನಿಖೆ ಮಾಡಿಸೋಣ ಎಂದರು.
ನಾವು ಕೆಂಪಣ್ಣ ಆರೋಪದ ಮೇಲೆ ತಾನೇ ತನಿಖೆ ಮಾಡ್ತಾ ಇರೋದು. ಬಿಬಿಎಂಪಿಯಲ್ಲಿ ಕೆಲಸ ಯಾರು ಕೊಟ್ಟರು ಗೊತ್ತಿಲ್ಲ ಟೆಂಡರ್ ಆಗಿಲ್ಲ, ಆದರೂ ಕಾಮಗಾರಿ ಮಾಡಿದ್ದಾರೆ. 25 ದಿನಕ್ಕೆ, 15 ದಿನಕ್ಕೆ ಬಿಲ್ ಆಗಿಬಿಡತ್ತಾ? ಹದಿನೈದೇ ದಿನಕ್ಕೆ ಇಲ್ಲಿ ಕೆಲಸ ಆಗಿಬಿಡುತ್ತಾ? ಅದಕ್ಕಾಗಿಯೇ ಪರಿಶೀಲನೆಗೆ ಅಧಿಕಾರಿಗಳನ್ನು ಹಾಕಿದ್ದೇನೆ ಎಂದರು.
ನಮ್ಮ ಜಲಸಂಪನ್ಮೂಲ ಇಲಾಖೆಯಲ್ಲಿ ದುಡ್ಡು ಇರೋದು 600 ಕೋಟಿ. ಬಿಲ್ ಬಂದಿರೋದು 25 ಸಾವಿರ ಕೋಟಿಗೆ. ನಾವು ಯಾರಿಗೆ ಅಂತ ಹಣ ಮಂಜೂರು ಮಾಡಲಿ? ಎಂದು ಅಸಹಾಯಕತೆ ತೋಡಿಕೊಂಡರು.
ನಮಗೂ ಜವಾಬ್ದಾರಿ ಇದೆ. ಇದೇ ಅಶ್ವತ್ಥ ನಾರಾಯಣ ಸದನದಲ್ಲಿ ತನಿಖೆ ಮಾಡಿಸಿ ಅಂತ ಆಗ್ರಹಿಸಿರಲಿಲ್ವಾ. ಅವರ ನುಡಿಮುತ್ತುಗಳನ್ನು ನಾವು ಕೇಳಲೇಬೇಕಲ್ಲ ಎಂದು ತಿರುಗೇಟು ನೀಡಿದರು.
ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…
ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…
ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…