BREAKING NEWS

ಚೆಲುವರಾಯಸ್ವಾಮಿ ವಿರುದ್ಧ ದೂರು| ತನಿಖೆ ಮಾಡಿಸೋಣ: ಡಿಕೆಶಿ

ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳಿಂದ ರಾಜ್ಯಪಾಲರಿಗೆ ದೂರು ವಿಚಾರವಾಗಿ ತನಿಖೆ ನಡೆಸೋಣ ಎಂದು ಡಿಸಿಎಂ‌ ಡಿಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನಲ್ಲಿ ಸೋಮವಾರ ಮಾತನಾಡಿದ ಅವರು, ಪಾಪ ಅವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ. ನಾವು ಮಂಡ್ಯದಲ್ಲಿ ಏಳಕ್ಕೆ ಆರು ಗೆದ್ದುಬಿಟ್ಟಿದ್ದೀವಲ್ಲ ಅದಕ್ಕಾಗಿ ಸಹಿಸಿಕೊಳ್ಳಲು ಆಗ್ತಿಲ್ಲ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

ಹೊಟ್ಟೆಕಿಚ್ಚು, ಮತ್ಸರಕ್ಕೆ ಮದ್ದಿಲ್ಲ.

ಬೇರೆ ಬೇರೆ ಆರೋಪಗಳನ್ನು ಮಾಡ್ತಿದ್ದಾರೆ. ಅದರ ಬಗ್ಗೆಯೂ ತನಿಖೆ ಮಾಡಿಸೋಣ ಎಂದು ತಿರುಗೇಟು ನೀಡಿದರು. ನನ್ನ ವಿರುದ್ಧವೂ ಮಾಜಿ ಸಚಿವ ಅಶ್ವತ್ಥ ನಾರಾಯಣ ತನಿಖೆ ಮಾಡಿಸಿ ಅಂತ ಹೇಳಿದ್ರು. ಮುನಿರತ್ನ ವಿರುದ್ಧ ಆರೋಪಗಳನ್ನು ತನಿಖೆ ಮಾಡಿಸಿ ಅಂದಿದ್ದರು. ಎಲ್ಲವನ್ನೂ ತನಿಖೆ ಮಾಡಿಸೋಣ ಎಂದರು.

ನಾವು ಕೆಂಪಣ್ಣ ಆರೋಪದ ಮೇಲೆ ತಾನೇ ತನಿಖೆ ಮಾಡ್ತಾ ಇರೋದು. ಬಿಬಿಎಂಪಿಯಲ್ಲಿ ಕೆಲಸ ಯಾರು ಕೊಟ್ಟರು ಗೊತ್ತಿಲ್ಲ ಟೆಂಡರ್ ಆಗಿಲ್ಲ, ಆದರೂ ಕಾಮಗಾರಿ ಮಾಡಿದ್ದಾರೆ. 25 ದಿನಕ್ಕೆ, 15 ದಿನಕ್ಕೆ ಬಿಲ್ ಆಗಿಬಿಡತ್ತಾ? ಹದಿನೈದೇ ದಿನಕ್ಕೆ ಇಲ್ಲಿ ಕೆಲಸ ಆಗಿಬಿಡುತ್ತಾ? ಅದಕ್ಕಾಗಿಯೇ ಪರಿಶೀಲನೆಗೆ ಅಧಿಕಾರಿಗಳನ್ನು ಹಾಕಿದ್ದೇನೆ ಎಂದರು‌.

ಗುತ್ತಿಗೆದಾರರು ಬಂದಿದ್ರು, ನೈಜತೆಯ ಕೆಲಸಗಳ ಬಗ್ಗೆ ನಮಗೆ ತಕರಾರಿಲ್ಲ.

ನಮ್ಮ ಜಲಸಂಪನ್ಮೂಲ ಇಲಾಖೆಯಲ್ಲಿ ದುಡ್ಡು ಇರೋದು 600 ಕೋಟಿ. ಬಿಲ್ ಬಂದಿರೋದು 25 ಸಾವಿರ ಕೋಟಿಗೆ. ನಾವು ಯಾರಿಗೆ ಅಂತ ಹಣ ಮಂಜೂರು ಮಾಡಲಿ? ಎಂದು ಅಸಹಾಯಕತೆ ತೋಡಿಕೊಂಡರು.

ಗುತ್ತಿಗೆದಾರರು ನೊಂದಿದ್ದಾರೆ, ಪಾಪ

ನಮಗೂ ಜವಾಬ್ದಾರಿ ಇದೆ. ಇದೇ ಅಶ್ವತ್ಥ ನಾರಾಯಣ ಸದನದಲ್ಲಿ ತನಿಖೆ ಮಾಡಿಸಿ ಅಂತ ಆಗ್ರಹಿಸಿರಲಿಲ್ವಾ. ಅವರ ನುಡಿಮುತ್ತುಗಳನ್ನು ನಾವು ಕೇಳಲೇಬೇಕಲ್ಲ ಎಂದು ತಿರುಗೇಟು ನೀಡಿದರು.

andolanait

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago