BREAKING NEWS

INDIA ಪದದ ‘ಅಸಮರ್ಪಕ ಬಳಕೆ’ಗಾಗಿ 26 ವಿರೋಧ ಪಕ್ಷಗಳ ವಿರುದ್ಧ ದೂರು ದಾಖಲು

ನವದೆಹಲಿ : ಇಂಡಿಯಾ ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಗುರುತಿಸುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹಾಗಾಗಿ ಮೈತ್ರಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರ ಡಾ.ಅವಿನೀಶ್ ಮಿಶ್ರಾ ಒತ್ತಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಜಂಟಿ ಸಭೆಯ ನಂತರ 26 ವಿರೋಧ ಪಕ್ಷಗಳು ತಮ್ಮ ಮೈತ್ರಿಗೆ ‘ಇಂಡಿಯಾ’ (Indian National Developmental Inclusive Alliance) ಎಂಬ ಹೆಸರು ಘೋಷಿಸಿತ್ತು.

ಮೈತ್ರಿಯ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ ಡಾ.ಅವಿನೀಶ್ ಮಿಶ್ರಾ, ಚುನಾವಣೆಯಲ್ಲಿ ಅನಗತ್ಯವಾಗಿ ‘ಇಂಡಿಯಾ’ ಎಂಬ ಪದವನ್ನು ಬಳಸಲಾಗುತ್ತಿದ್ದು, ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 26 ರಾಜಕೀಯ ಪಕ್ಷಗಳು ದೇಶದ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಲಾಂಛನಗಳ ಕಾಯಿದೆಯ ಸೆಕ್ಷನ್ 2(ಸಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಲಾಂಛನಗಳ ಕಾಯಿದೆಯ ಸೆಕ್ಷನ್ 5, ಲಾಂಛನಗಳ ಕಾಯಿದೆಯ ಸೆಕ್ಷನ್ 3 ರ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ₹ 500 ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಎಎನ್ಐ ವರದಿ ಉಲ್ಲೇಖಿಸಿದೆ.

ಇಂದು ಬೆಳಗ್ಗೆ ಮಹಾರಾಷ್ಟ್ರ ಬಿಜೆಪಿ ನಾಯಕ ಅಶುತೋಷ್ ದುಬೆ ಕೂಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ‘ಇಂಡಿಯಾ’ವನ್ನು ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದು ಇದು ದೇಶದ ಘನತೆಗೆ ಅಗೌರವ ತಂದಿದೆ ಎಂದು ಹೇಳಿದ್ದಾರೆ.

“ಈ ವಿಷಯದಲ್ಲಿ ನಿಮ್ಮ ಮಧ್ಯಸ್ಥಿಕೆಯು ನಮ್ಮ ರಾಷ್ಟ್ರದ ಘನತೆಯನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ದೇಶ ನಿಂತಿರುವ ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ” ಎಂದು ಬಿಜೆಪಿ ನಾಯಕ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು 26 ವಿರೋಧ ಪಕ್ಷಗಳು ಮಂಗಳವಾರ ‘ಇಂಡಿಯಾ’ ಎಂಬ ಮೈತ್ರಿಕೂಟ ರಚಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು “ಇಂಡಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ” ಹೋರಾಟ ನಡೆಯಲಿದೆ ಎಂದು ಹೇಳಿದ್ದಾರೆ.

ಹೊಸದಾಗಿ ರೂಪುಗೊಂಡ ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಎಲ್‌ಜಿಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ್’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ.

ಮೈತ್ರಿಕೂಟವು 11 ಸದಸ್ಯರ ಸಮನ್ವಯ ಸಮಿತಿಯನ್ನು ಸ್ಥಾಪಿಸಲು ಒಪ್ಪಿಕೊಂಡಿತು. ಆದರೆ ಮುಂಬೈನಲ್ಲಿ ಅವರ ಮುಂದಿನ ಸಭೆಯಲ್ಲಿ ಅದರ ಸದಸ್ಯರು ಮತ್ತು ಸಂಚಾಲಕನ ನಿರ್ಧಾರವನ್ನು ಬಿಟ್ಟಿತು. ಮೊದಲ ಸಭೆ ಬಿಹಾರದ ಪಾಟ್ನಾದಲ್ಲಿ ನಡೆದರೆ, ಎರಡನೆಯ ಸಭೆಯು ಕರ್ನಾಟಕದ ಬೆಂಗಳೂರಿನಲ್ಲಿ ನಡೆದಿದೆ.

26 ವಿರೋಧ ಪಕ್ಷಗಳು:  ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಎಎಪಿ, ಜೆಡಿ(ಯು), ಆರ್‌ಜೆಡಿ, ಜೆಎಂಎಂ, ಎನ್‌ಸಿಪಿ (ಶರದ್ ಪವಾರ್), ಶಿವಸೇನಾ (ಯುಬಿಟಿ), ಎಸ್‌ಪಿ, ಎನ್‌ಸಿ, ಪಿಡಿಪಿ, ಸಿಪಿಐ(ಎಂ), ಸಿಪಿಐ, ಆರ್‌ಎಲ್‌ಡಿ ,  ಎಂಡಿಎಂಕೆ, ಕೊಂಗುನಾಡು ಮಕ್ಕಳ್ ದೇಶಿಯಾ ಕಚ್ಚಿ (KMDK), ವಿಸಿಕೆ, ಆರ್​ಎಸ್​​ಪಿ, ಸಿಪಿಐ- ಎಂಎಲ್ (ಲಿಬರೇಶನ್), ಫಾರ್ವರ್ಡ್ ಬ್ಲಾಕ್, ಐಯುಎಂಲ್, ಕೇರಳ ಕಾಂಗ್ರೆಸ್ (ಜೋಸೆಫ್), ಕೇರಳ ಕಾಂಗ್ರೆಸ್ (ಮಾಣಿ), ಅಪ್ನಾ ದಳ (ಕಾಮೆರವಾಡಿ), ಮತ್ತು ಮನಿತಾನೇಯ ಮಕ್ಕಳ್ ಕಚ್ಚಿ (ಎಂಎಂಕೆ).

andolanait

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

13 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

13 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

14 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

14 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

15 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

15 hours ago