BREAKING NEWS

INDIA ಪದದ ‘ಅಸಮರ್ಪಕ ಬಳಕೆ’ಗಾಗಿ 26 ವಿರೋಧ ಪಕ್ಷಗಳ ವಿರುದ್ಧ ದೂರು ದಾಖಲು

ನವದೆಹಲಿ : ಇಂಡಿಯಾ ಹೆಸರನ್ನು ಅಸಮರ್ಪಕವಾಗಿ ಬಳಸಿದ ಆರೋಪದ ಮೇಲೆ 26 ವಿರೋಧ ಪಕ್ಷಗಳ ವಿರುದ್ಧ ದೆಹಲಿಯ ಬರಾಖಂಬಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಚುನಾವಣೆಯಲ್ಲಿ ಅನಗತ್ಯ ಪ್ರಭಾವ ಮತ್ತು ಗುರುತಿಸುವುದಕ್ಕಾಗಿ ಈ ಹೆಸರನ್ನು ಬಳಸಲಾಗಿದೆ. ಹಾಗಾಗಿ ಮೈತ್ರಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರ ಡಾ.ಅವಿನೀಶ್ ಮಿಶ್ರಾ ಒತ್ತಾಯಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಮಂಗಳವಾರ ಬೆಂಗಳೂರಿನಲ್ಲಿ ನಡೆದ ಜಂಟಿ ಸಭೆಯ ನಂತರ 26 ವಿರೋಧ ಪಕ್ಷಗಳು ತಮ್ಮ ಮೈತ್ರಿಗೆ ‘ಇಂಡಿಯಾ’ (Indian National Developmental Inclusive Alliance) ಎಂಬ ಹೆಸರು ಘೋಷಿಸಿತ್ತು.

ಮೈತ್ರಿಯ ಹೆಸರಿಗೆ ಆಕ್ಷೇಪ ವ್ಯಕ್ತಪಡಿಸಿದ ಡಾ.ಅವಿನೀಶ್ ಮಿಶ್ರಾ, ಚುನಾವಣೆಯಲ್ಲಿ ಅನಗತ್ಯವಾಗಿ ‘ಇಂಡಿಯಾ’ ಎಂಬ ಪದವನ್ನು ಬಳಸಲಾಗುತ್ತಿದ್ದು, ಜನರ ಭಾವನೆಗಳಿಗೆ ಧಕ್ಕೆ ತಂದಿರುವ ಕಾರಣ ಪಕ್ಷಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. 26 ರಾಜಕೀಯ ಪಕ್ಷಗಳು ದೇಶದ ಹೆಸರನ್ನು ದುರ್ಬಳಕೆ ಮಾಡಿಕೊಂಡಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಲಾಂಛನಗಳ ಕಾಯಿದೆಯ ಸೆಕ್ಷನ್ 2(ಸಿ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಲಾಂಛನಗಳ ಕಾಯಿದೆಯ ಸೆಕ್ಷನ್ 5, ಲಾಂಛನಗಳ ಕಾಯಿದೆಯ ಸೆಕ್ಷನ್ 3 ರ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ₹ 500 ದಂಡವನ್ನು ವಿಧಿಸಲು ಅವಕಾಶ ನೀಡುತ್ತದೆ ಎಂದು ಎಎನ್ಐ ವರದಿ ಉಲ್ಲೇಖಿಸಿದೆ.

ಇಂದು ಬೆಳಗ್ಗೆ ಮಹಾರಾಷ್ಟ್ರ ಬಿಜೆಪಿ ನಾಯಕ ಅಶುತೋಷ್ ದುಬೆ ಕೂಡ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದು, ‘ಇಂಡಿಯಾ’ವನ್ನು ಪ್ರತಿಪಕ್ಷಗಳು ರಾಜಕೀಯ ಲಾಭಕ್ಕಾಗಿ ಬಳಸಿಕೊಂಡಿದ್ದು ಇದು ದೇಶದ ಘನತೆಗೆ ಅಗೌರವ ತಂದಿದೆ ಎಂದು ಹೇಳಿದ್ದಾರೆ.

“ಈ ವಿಷಯದಲ್ಲಿ ನಿಮ್ಮ ಮಧ್ಯಸ್ಥಿಕೆಯು ನಮ್ಮ ರಾಷ್ಟ್ರದ ಘನತೆಯನ್ನು ಕಾಪಾಡಿಕೊಳ್ಳಲು ಮತ್ತು ನಮ್ಮ ದೇಶ ನಿಂತಿರುವ ಪ್ರಜಾಪ್ರಭುತ್ವದ ತತ್ವಗಳನ್ನು ಕಾಪಾಡಲು ಸಹಾಯ ಮಾಡುತ್ತದೆ ಎಂದು ನಾನು ನಂಬುತ್ತೇನೆ” ಎಂದು ಬಿಜೆಪಿ ನಾಯಕ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಯನ್ನು ಎದುರಿಸಲು 26 ವಿರೋಧ ಪಕ್ಷಗಳು ಮಂಗಳವಾರ ‘ಇಂಡಿಯಾ’ ಎಂಬ ಮೈತ್ರಿಕೂಟ ರಚಿಸಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು “ಇಂಡಿಯಾ ಮತ್ತು ಪ್ರಧಾನಿ ನರೇಂದ್ರ ಮೋದಿ ನಡುವೆ” ಹೋರಾಟ ನಡೆಯಲಿದೆ ಎಂದು ಹೇಳಿದ್ದಾರೆ.

ಹೊಸದಾಗಿ ರೂಪುಗೊಂಡ ಮೈತ್ರಿಕೂಟವು ಜಾತಿ ಗಣತಿ, ಮಣಿಪುರ ಹಿಂಸಾಚಾರದಿಂದ ಹಿಡಿದು ರಾಜ್ಯಪಾಲರು ಮತ್ತು ಎಲ್‌ಜಿಗಳ ಪಾತ್ರ ಮತ್ತು ನೋಟು ಅಮಾನ್ಯೀಕರಣದವರೆಗಿನ ವಿವಿಧ ವಿಷಯಗಳ ಕುರಿತು ಪ್ರಸ್ತಾಪಿಸುವ ‘ಸಾಮೂಹಿಕ ಸಂಕಲ್ಪ್’ ಘೋಷಣೆಯನ್ನು ಸಹ ಬಿಡುಗಡೆ ಮಾಡಿದೆ.

ಮೈತ್ರಿಕೂಟವು 11 ಸದಸ್ಯರ ಸಮನ್ವಯ ಸಮಿತಿಯನ್ನು ಸ್ಥಾಪಿಸಲು ಒಪ್ಪಿಕೊಂಡಿತು. ಆದರೆ ಮುಂಬೈನಲ್ಲಿ ಅವರ ಮುಂದಿನ ಸಭೆಯಲ್ಲಿ ಅದರ ಸದಸ್ಯರು ಮತ್ತು ಸಂಚಾಲಕನ ನಿರ್ಧಾರವನ್ನು ಬಿಟ್ಟಿತು. ಮೊದಲ ಸಭೆ ಬಿಹಾರದ ಪಾಟ್ನಾದಲ್ಲಿ ನಡೆದರೆ, ಎರಡನೆಯ ಸಭೆಯು ಕರ್ನಾಟಕದ ಬೆಂಗಳೂರಿನಲ್ಲಿ ನಡೆದಿದೆ.

26 ವಿರೋಧ ಪಕ್ಷಗಳು:  ಕಾಂಗ್ರೆಸ್, ಟಿಎಂಸಿ, ಡಿಎಂಕೆ, ಎಎಪಿ, ಜೆಡಿ(ಯು), ಆರ್‌ಜೆಡಿ, ಜೆಎಂಎಂ, ಎನ್‌ಸಿಪಿ (ಶರದ್ ಪವಾರ್), ಶಿವಸೇನಾ (ಯುಬಿಟಿ), ಎಸ್‌ಪಿ, ಎನ್‌ಸಿ, ಪಿಡಿಪಿ, ಸಿಪಿಐ(ಎಂ), ಸಿಪಿಐ, ಆರ್‌ಎಲ್‌ಡಿ ,  ಎಂಡಿಎಂಕೆ, ಕೊಂಗುನಾಡು ಮಕ್ಕಳ್ ದೇಶಿಯಾ ಕಚ್ಚಿ (KMDK), ವಿಸಿಕೆ, ಆರ್​ಎಸ್​​ಪಿ, ಸಿಪಿಐ- ಎಂಎಲ್ (ಲಿಬರೇಶನ್), ಫಾರ್ವರ್ಡ್ ಬ್ಲಾಕ್, ಐಯುಎಂಲ್, ಕೇರಳ ಕಾಂಗ್ರೆಸ್ (ಜೋಸೆಫ್), ಕೇರಳ ಕಾಂಗ್ರೆಸ್ (ಮಾಣಿ), ಅಪ್ನಾ ದಳ (ಕಾಮೆರವಾಡಿ), ಮತ್ತು ಮನಿತಾನೇಯ ಮಕ್ಕಳ್ ಕಚ್ಚಿ (ಎಂಎಂಕೆ).

andolanait

Recent Posts

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

18 hours ago

ಓದುಗರ ಪತ್ರ: ಎಲ್‌ಇಡಿ ಪರದೆ ಮೂಲಕ ಚಾಮುಂಡಿ ದರ್ಶನ ಮಾಡಿಸಿ

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…

18 hours ago

ಓದುಗರ ಪತ್ರ: ಪಾಲಿಕೆ ಆಯುಕ್ತರಾದ ಎಂ.ಕೆ. ಸವಿತಾ ನಡೆ ಶ್ಲಾಘನೀಯ

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…

18 hours ago

ಓದುಗರ ಪತ್ರ: ಏನೇ ಓದಿದ್ದರೂ ಬೇಕು ಪಿಸಿ ಹುದ್ದೆ !

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…

18 hours ago

ರವಿಯ ನೋಡ ಹೋಗಿ ಶಶಿಯ ಕಂಡುಬಂದೆ

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…

18 hours ago

ಕಾರ್ಗಿಲ್ ಕಾಲದ ಸುಬೇದಾರ್ ಹೈದರ್ ಮೈಸೂರಿನಲ್ಲಿದ್ದಾರೆ

ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…

19 hours ago