BREAKING NEWS

IPL Retention 2024: ರಾಜಸ್ಥಾನ್‌ ರಾಯಲ್ಸ್‌ ಉಳಿಸಿಕೊಂಡ, ಕೈಬಿಟ್ಟ ಆಟಗಾರರ ಸಂಪೂರ್ಣ ಪಟ್ಟಿ

ಮುಂದಿನ ವರ್ಷ ಮಾರ್ಚ್‌ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್‌ 26 ) ಸಂಜೆ 4 ಗಂಟೆಯೇ ಡೆಡ್‌ಲೈನ್‌ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್‌ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್‌ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ರಾಜಸ್ಥಾನ್‌ ರಾಯಲ್ಸ್‌ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್‌ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು : ಸಂಜು ಸ್ಯಾಮ್ಸನ್‌ ( ನಾಯಕ ), ಶಿಮ್ರಾನ್‌ ಹೆಟ್ಮಾಯರ್‌, ಜೋಸ್‌ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಧ್ರುವ್‌ ಜುರೆಲ್‌, ರಿಯಾನ್‌ ಪರಾಗ್‌, ಡೊನೊವೆನ್‌ ಫೆರೈರಾ, ಕುನಾಲ್‌ ರಾಥೋರ್‌, ರವಿಚಂದ್ರನ್‌ ಅಶ್ವಿನ್‌, ಕುಲ್‌ದೀಪ್‌ ಸೇನ್‌, ನವ್‌ದೀಪ್‌ ಸೈನಿ, ಪ್ರಸಿದ್ಧ್‌ ಕೃಷ್ಣ, ಟ್ರೆಂಟ್‌ ಬೌಲ್ಟ್‌, ಯುಜ್ವೇಂದ್ರ ಚಹಲ್‌, ಆಡಂ ಜಂಪಾ ಹಾಗೂ ಆವೇಶ್‌ ಖಾನ್‌. ( ಅವೇಶ್‌ ಖಾನ್ ಲಕ್ನೋ ಸೂಪರ್‌ಜೈಂಟ್ಸ್‌ ತಂಡದಿಂದ ವಿನಿಮಯಗೊಂಡಿದ್ದಾರೆ.)‌

ಬಿಡುಗಡೆಗೊಂಡ ಆಟಗಾರರು: ಜೋ ರೂಟ್‌, ಅಬ್ದುಲ್‌ ಬಸಿತ್‌, ಜೇಸನ್‌ ಹೋಲ್ಡರ್‌, ಆಕಾಶ್‌ ವಸಿಷ್ಠ್‌, ಕುಲ್‌ದೀಪ್‌ ಯಾದವ್‌, ಒಬೆಡ್‌ ಮೆಕ್‌ಗಾಯ್‌, ಮುರುಗನ್‌ ಅಶ್ವಿನ್‌, ಕೆಸಿ ಕಾರಿಯಪ್ಪ ಹಾಗೂ ಕೆಎಂ ಆಸಿಫ್‌.
ಜೋ ರೂಟ್‌ ಮುಂಬರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ಹರಾಜಿನಲ್ಲಿ ಭಾಗವಹಿಸದೇ ಉಳಿಯಲಿದ್ದಾರೆ.

andolana

Recent Posts

ಪೂರ್ಣ ಸಿದ್ಧವಾಗದ ಎಕ್ಸ್‌ಪ್ರೇಸ್‌ ವೇ : ಟೋಲ್‌ ಕಡಿತ

ಹೊಸದಿಲ್ಲಿ : ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಸಾರ್ವಜನಿಕರಿಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಮಹತ್ವದ ಸುದ್ದಿಯೊಂದನ್ನು ನೀಡಿದೆ.…

6 hours ago

ಸೇವಾ ತೀರ್ಥ ಸಂಕೀರ್ಣ ಉದ್ಘಾಟಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ), ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯ ಮತ್ತು ಸಂಪುಟ ಸಚಿವಾಲಯಗಳನ್ನು ಒಳಗೊಂಡಿರುವ ‘ಸೇವಾ…

7 hours ago

T20 World Cup | ಕೆನಡಾ ವಿರುದ್ಧ ಯುಎಇಗೆ ರೋಚಕ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಶುಕ್ರವಾರ ನಡೆದ ‘ಡಿ’ಗುಂಪಿನ ಪಂದ್ಯದಲ್ಲಿ ಯುಎಇ ಕ್ರಿಕೆಟ್ ತಂಡವು ಕೆನಡಾ ತಂಡವನ್ನು ಐದು…

7 hours ago

ದಳಪತಿ ವಿಜಯ್‌ ರ‍್ಯಾಲಿಯಲ್ಲಿ ನಿಲ್ಲದ ದುರಂತ : ಮತ್ತೊಬ್ಬನ ಸಾವು

ಸೇಲಂ : ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ರ‍್ಯಾಲಿ ವೇಳೆ ಕುಸಿದು ಬಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗದ ಮಧ್ಯೆ…

8 hours ago

ರೈಲ್‌ಒನ್‌ ಆಪ್‌ : ಒಂದೇ ಕಡೆ ಸಿಗಲಿದೆ ರೈಲು ಸೌಲಭ್ಯಗಳು

ಬೆಂಗಳೂರು : ಭಾರತೀಯ ರೈಲ್ವೆಯು ತನ್ನ ಅಧಿಕೃತ ಆಪ್ ‘ರೈಲ್‌ಒನ್’ ಅನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಇದರಲ್ಲಿ ರೈಲ್ವೆ ಸೇವೆಗಳೆಲ್ಲವೂ…

8 hours ago

ತಾರಿಖ್‌ ರೆಹಮಾನ್‌ ಬಾಂಗ್ಲಾದೇಶದ ನೂತನ ಪ್ರಧಾನಿ

ಢಾಕಾ : ಬಾಂಗ್ಲಾದೇಶ ಸಾರ್ವತ್ರಿಕ ಚುನಾವಣೆಯಲ್ಲಿ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ(ಬಿಎನ್‌ಪಿ) ಗೆದ್ದು ಬೀಗಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ…

8 hours ago