BREAKING NEWS

IPL Retention 2024: ರಾಜಸ್ಥಾನ್‌ ರಾಯಲ್ಸ್‌ ಉಳಿಸಿಕೊಂಡ, ಕೈಬಿಟ್ಟ ಆಟಗಾರರ ಸಂಪೂರ್ಣ ಪಟ್ಟಿ

ಮುಂದಿನ ವರ್ಷ ಮಾರ್ಚ್‌ ತಿಂಗಳಿನಲ್ಲಿ ಆರಂಭವಾಗಲಿರುವ 17ನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಸಲುವಾಗಿ ಡಿಸೆಂಬರ್‌ 19ರಂದು ದುಬೈನಲ್ಲಿ ಮಿನಿ ಹರಾಜು ಪ್ರಕ್ರಿಯೆಯನ್ನು ಏರ್ಪಡಿಸಲಾಗಿದೆ. ಇನ್ನು ಎಲ್ಲಾ ಫ್ರಾಂಚೈಸಿಗಳು ಯಾವ ಆಟಗಾರರನ್ನು ಉಳಿಸಿಕೊಳ್ಳುತ್ತವೆ ಹಾಗೂ ಯಾವ ಆಟಗಾರರನ್ನು ಬಿಡುಗಡೆಗೊಳಿಸುತ್ತೆ ಎಂಬುದನ್ನು ಪ್ರಕಟಿಸಲು ಇಂದು ( ನವೆಂಬರ್‌ 26 ) ಸಂಜೆ 4 ಗಂಟೆಯೇ ಡೆಡ್‌ಲೈನ್‌ ಆಗಿತ್ತು.

ಈ ಸಮಯದ ಗಡುವು ಈಗ ಮುಕ್ತಾಯವಾಗಿದ್ದು, ಯಾವ ತಂಡಗಳು ಯಾವ ಆಟಗಾರರನ್ನು ರಿಟೈನ್‌ ಮಾಡಿಕೊಂಡಿವೆ ಹಾಗೂ ಯಾವ ಆಟಗಾರರನ್ನು ರಿಲೀಸ್‌ ಮಾಡಿವೆ ಎಂಬ ಮಾಹಿತಿ ಹೊರಬಿದ್ದಿದೆ. ರಾಜಸ್ಥಾನ್‌ ರಾಯಲ್ಸ್‌ ಫ್ರಾಂಚೈಸಿ ಯಾವೆಲ್ಲಾ ಆಟಗಾರರಿಗೆ ಸ್ಥಾನ ನೀಡಿದೆ ಹಾಗೂ ಯಾವೆಲ್ಲಾ ಆಟಗಾರರಿಗೆ ಕೊಕ್‌ ಕೊಟ್ಟಿದೆ ಎಂಬ ಮಾಹಿತಿ ಈ ಕೆಳಕಂಡಂತಿದೆ..

ಉಳಿಸಿಕೊಂಡ ಆಟಗಾರರು : ಸಂಜು ಸ್ಯಾಮ್ಸನ್‌ ( ನಾಯಕ ), ಶಿಮ್ರಾನ್‌ ಹೆಟ್ಮಾಯರ್‌, ಜೋಸ್‌ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಧ್ರುವ್‌ ಜುರೆಲ್‌, ರಿಯಾನ್‌ ಪರಾಗ್‌, ಡೊನೊವೆನ್‌ ಫೆರೈರಾ, ಕುನಾಲ್‌ ರಾಥೋರ್‌, ರವಿಚಂದ್ರನ್‌ ಅಶ್ವಿನ್‌, ಕುಲ್‌ದೀಪ್‌ ಸೇನ್‌, ನವ್‌ದೀಪ್‌ ಸೈನಿ, ಪ್ರಸಿದ್ಧ್‌ ಕೃಷ್ಣ, ಟ್ರೆಂಟ್‌ ಬೌಲ್ಟ್‌, ಯುಜ್ವೇಂದ್ರ ಚಹಲ್‌, ಆಡಂ ಜಂಪಾ ಹಾಗೂ ಆವೇಶ್‌ ಖಾನ್‌. ( ಅವೇಶ್‌ ಖಾನ್ ಲಕ್ನೋ ಸೂಪರ್‌ಜೈಂಟ್ಸ್‌ ತಂಡದಿಂದ ವಿನಿಮಯಗೊಂಡಿದ್ದಾರೆ.)‌

ಬಿಡುಗಡೆಗೊಂಡ ಆಟಗಾರರು: ಜೋ ರೂಟ್‌, ಅಬ್ದುಲ್‌ ಬಸಿತ್‌, ಜೇಸನ್‌ ಹೋಲ್ಡರ್‌, ಆಕಾಶ್‌ ವಸಿಷ್ಠ್‌, ಕುಲ್‌ದೀಪ್‌ ಯಾದವ್‌, ಒಬೆಡ್‌ ಮೆಕ್‌ಗಾಯ್‌, ಮುರುಗನ್‌ ಅಶ್ವಿನ್‌, ಕೆಸಿ ಕಾರಿಯಪ್ಪ ಹಾಗೂ ಕೆಎಂ ಆಸಿಫ್‌.
ಜೋ ರೂಟ್‌ ಮುಂಬರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಭಾಗವಹಿಸದಿರಲು ನಿರ್ಧರಿಸಿದ್ದಾರೆ. ಹೀಗಾಗಿ ಅವರು ಹರಾಜಿನಲ್ಲಿ ಭಾಗವಹಿಸದೇ ಉಳಿಯಲಿದ್ದಾರೆ.

andolana

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

3 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

3 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

3 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

3 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

3 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

3 hours ago