BREAKING NEWS

ಟ್ರಾನ್ಸ್ ಫರ್ ದಂಧೆ ಆರೋಪಕ್ಕೆ ಪುಷ್ಟಿ: 25 ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಶಾಸಕರ ಪತ್ರ ವೈರಲ್ !

ಬೆಂಗಳೂರು: ವರ್ಗಾವಣೆ ದಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ಕೂಡ ಧ್ವನಿಗೂಡಿಸಿದೆ.

ಈ ನಡುವೆಯೇ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ 25ಕ್ಕೂ ಹೆಚ್ಚು ಪೊಲೀಸರನ್ನು ವರ್ಗಾವಣೆ ಮಾಡುವಂತೆ ಕೋರಿ ಐಜಿಪಿಗೆ ಪತ್ರ ಬರೆದಿದ್ದಾರೆ.

ವರ್ಗಾವಣೆಯಾಗಬೇಕಾದ ಪೊಲೀಸ್‌ ಅಧಿಕಾರಿಗಳ ಹೆಸರಿನ ಮುಂದೆ ವರ್ಗಾಯಿಸಬೇಕಾದ ಸ್ಥಳವನ್ನು ಕೂಡ ನಮೂದಿಸಿರುವುದು ವರ್ಗಾವಣೆ ದಂಧೆಯ ಅನುಮಾನಕ್ಕೆ ಕಾರಣವಾಗಿದೆ.

ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಲೋಕೇ‌ಶ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ನಡೆ ಮೇಲೆ ಪ್ರತಿಪಕ್ಷದ ನಾಯಕರು ಕಿಡಿಕಾರಿದ್ದಾರೆ. ರಾಯರೆಡ್ಡಿ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಮೂಹಿಕ ವರ್ಗಾವಣೆ ಮಾಡಿಸುವುದಕ್ಕೆ ಇವರ‍್ಯಾರು ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಬಸವರಾಜ ರಾಯರೆಡ್ಡಿ ಅವರ ಹೆಸರಿನ ಲೆಟರ್‌ ಹೆಡ್‌ನಲ್ಲಿಯೇ ಪತ್ರ ಬರೆಯಲಾಗಿದ್ದು, ಕೊಪ್ಪಳ ಜಿಲ್ಲೆಯ 25 ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ದಾರೆ. ಅದರಲ್ಲೂ ತಮ್ಮ ಕ್ಷೇತ್ರ ಯಲಬುರ್ಗಾ ವ್ಯಾಪ್ತಿಯ ಕುಕನೂರು ಮತ್ತು ಯಲಬುರ್ಗಾ ಪೊಲೀಸ್‌ ಠಾಣೆಗಳಿಗೆ ಸೇರಿದ ಹೆಚ್ಚಿನ ಪೊಲೀಸರನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ದಾರೆ. ಜೊತೆಗೆ ಕೊಪ್ಪಳ, ಗಂಗಾವತಿ ಹಾಗೂ ಕುಷ್ಟಗಿ ತಾಲೂಕುಗಳ ಪೊಲೀಸರನ್ನು ಕೂಡ ವರ್ಗಾವಣೆ ಮಾಡಬೇಕೆಂದು ಪತ್ರದಲ್ಲಿ ಹೇಳಿದ್ದಾರೆ.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟ್‌ ಎಂಬ ಆರೋಪವನ್ನು ಮಾಡುತ್ತಾ ಬಂದಿದ್ದಾರೆ. ಪದೇ ಪದೇ ವೈಎಸ್‌ಟಿ ಟ್ಯಾಕ್ಸ್‌ ಬಗ್ಗೆಯೂ ಪುನರುಚ್ಛರಿಸುತ್ತಿದ್ದಾರೆ. ಈ ವೇಳೆ ಬಸವರಾಜ ರಾಯರೆಡ್ಡಿ ಅವರ ಪತ್ರ ವಿಪಕ್ಷ ನಾಯಕರಿಗೆ ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ.

andolanait

Recent Posts

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

45 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

3 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

3 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

3 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

3 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

4 hours ago