BREAKING NEWS

ಟ್ರಾನ್ಸ್ ಫರ್ ದಂಧೆ ಆರೋಪಕ್ಕೆ ಪುಷ್ಟಿ: 25 ಪೊಲೀಸ್ ಸಿಬ್ಬಂದಿ ವರ್ಗಾವಣೆಗೆ ಶಾಸಕರ ಪತ್ರ ವೈರಲ್ !

ಬೆಂಗಳೂರು: ವರ್ಗಾವಣೆ ದಂಧೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಪದೇ ಪದೇ ಆರೋಪಿಸುತ್ತಲೇ ಇದ್ದಾರೆ. ಎಚ್‌ಡಿಕೆ ಆರೋಪಕ್ಕೆ ಬಿಜೆಪಿ ಕೂಡ ಧ್ವನಿಗೂಡಿಸಿದೆ.

ಈ ನಡುವೆಯೇ ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅವರು ಕೊಪ್ಪಳ ಜಿಲ್ಲೆಯ 25ಕ್ಕೂ ಹೆಚ್ಚು ಪೊಲೀಸರನ್ನು ವರ್ಗಾವಣೆ ಮಾಡುವಂತೆ ಕೋರಿ ಐಜಿಪಿಗೆ ಪತ್ರ ಬರೆದಿದ್ದಾರೆ.

ವರ್ಗಾವಣೆಯಾಗಬೇಕಾದ ಪೊಲೀಸ್‌ ಅಧಿಕಾರಿಗಳ ಹೆಸರಿನ ಮುಂದೆ ವರ್ಗಾಯಿಸಬೇಕಾದ ಸ್ಥಳವನ್ನು ಕೂಡ ನಮೂದಿಸಿರುವುದು ವರ್ಗಾವಣೆ ದಂಧೆಯ ಅನುಮಾನಕ್ಕೆ ಕಾರಣವಾಗಿದೆ.

ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಲೋಕೇ‌ಶ್‌ ಕುಮಾರ್‌ ಅವರಿಗೆ ಪತ್ರ ಬರೆದಿರುವ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿ ನಡೆ ಮೇಲೆ ಪ್ರತಿಪಕ್ಷದ ನಾಯಕರು ಕಿಡಿಕಾರಿದ್ದಾರೆ. ರಾಯರೆಡ್ಡಿ ಬರೆದ ಪತ್ರ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸಾಮೂಹಿಕ ವರ್ಗಾವಣೆ ಮಾಡಿಸುವುದಕ್ಕೆ ಇವರ‍್ಯಾರು ಎಂಬ ಪ್ರಶ್ನೆಗಳು ಕೇಳಿಬರುತ್ತಿವೆ.

ಬಸವರಾಜ ರಾಯರೆಡ್ಡಿ ಅವರ ಹೆಸರಿನ ಲೆಟರ್‌ ಹೆಡ್‌ನಲ್ಲಿಯೇ ಪತ್ರ ಬರೆಯಲಾಗಿದ್ದು, ಕೊಪ್ಪಳ ಜಿಲ್ಲೆಯ 25 ಪೊಲೀಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ದಾರೆ. ಅದರಲ್ಲೂ ತಮ್ಮ ಕ್ಷೇತ್ರ ಯಲಬುರ್ಗಾ ವ್ಯಾಪ್ತಿಯ ಕುಕನೂರು ಮತ್ತು ಯಲಬುರ್ಗಾ ಪೊಲೀಸ್‌ ಠಾಣೆಗಳಿಗೆ ಸೇರಿದ ಹೆಚ್ಚಿನ ಪೊಲೀಸರನ್ನು ವರ್ಗಾವಣೆ ಮಾಡಲು ಮನವಿ ಮಾಡಿದ್ದಾರೆ. ಜೊತೆಗೆ ಕೊಪ್ಪಳ, ಗಂಗಾವತಿ ಹಾಗೂ ಕುಷ್ಟಗಿ ತಾಲೂಕುಗಳ ಪೊಲೀಸರನ್ನು ಕೂಡ ವರ್ಗಾವಣೆ ಮಾಡಬೇಕೆಂದು ಪತ್ರದಲ್ಲಿ ಹೇಳಿದ್ದಾರೆ.

ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟ್‌ ಎಂಬ ಆರೋಪವನ್ನು ಮಾಡುತ್ತಾ ಬಂದಿದ್ದಾರೆ. ಪದೇ ಪದೇ ವೈಎಸ್‌ಟಿ ಟ್ಯಾಕ್ಸ್‌ ಬಗ್ಗೆಯೂ ಪುನರುಚ್ಛರಿಸುತ್ತಿದ್ದಾರೆ. ಈ ವೇಳೆ ಬಸವರಾಜ ರಾಯರೆಡ್ಡಿ ಅವರ ಪತ್ರ ವಿಪಕ್ಷ ನಾಯಕರಿಗೆ ಪ್ರಮುಖ ಅಸ್ತ್ರ ಸಿಕ್ಕಂತಾಗಿದೆ.

andolanait

Recent Posts

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

2 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

7 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

13 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

13 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

13 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

14 hours ago