ಬೆಂಗಳೂರು : ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.
ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.
ಈ ಹಿಂದೆ ಕೂಡ 2023ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.
ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ತೆಲಂಗಾಣ, ಆಂಧ್ರಪ್ರದೇಶದಲ್ಲಿನ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸಿಬಿಐ ಅನುಮತಿ ಕೇಳಿತ್ತು. ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು.
ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…