BREAKING NEWS

ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಜನಾರ್ದನ ರೆಡ್ಡಿ ಆಸ್ತಿ ಜಪ್ತಿ ಮಾಡಿ : ಸಿಬಿಐ ವಿಶೇಷ ಕೋರ್ಟ್ ಆದೇಶ

ಬೆಂಗಳೂರು : ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ದನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

ಜನಾರ್ದನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

ಈ ಹಿಂದೆ ಕೂಡ 2023ರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್​​ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.

ಕಳೆ‌ದ ವರ್ಷ ಆಗಸ್ಟ್ ತಿಂಗಳಲ್ಲಿ ತೆಲಂಗಾಣ, ಆಂಧ್ರಪ್ರದೇಶದಲ್ಲಿನ ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಸಿಬಿಐ ಅನುಮತಿ ಕೇಳಿತ್ತು. ಜನಾರ್ದನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಸರ್ಕಾರ ಅನುಮತಿ ನೀಡದ ಹಿನ್ನೆಲೆ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು.

lokesh

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

16 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

16 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago