BREAKING NEWS

ಕಾಂಗ್ರೆಸ್‌ನ 23 ವರ್ಷದ‌ ತ್ರಿವೇಣಿ ಬಳ್ಳಾರಿ ಮೇಯರ್: ಜಾನಕಮ್ಮ ಉಪ ಮೇಯರ್

ಬಳ್ಳಾರಿ: ನಗರದ ಮೇಯರ್ ಅಗಿ ಕಾಂಗ್ರೆಸ್‌ನ ತ್ರಿವೇಣಿ ಮತ್ತು ಉಪ ಮೇಯರ್ ಅಗಿ‌‌ ಜಾನಕಮ್ಮ ಬುಧವಾರ ಆಯ್ಕೆಯಾದರು.

ಮೇಯರ್ ಗದ್ದುಗೆಗಾಗಿ ಕಾಂಗ್ರೆಸ್‌ನಲ್ಲಿ ಮೂರು ದಿನಗಳಿಂದ ನಡೆದ‌ ಗುದ್ದಾಟ ಕೊನೆ ಗಳಿಗೆವರೆಗೂ ನಡೆಯಿತು. ಇದರ ಲಾಭ ಪಡೆಯಲು ಬಿಜೆಪಿ ತೆರೆಮರೆಯಲ್ಲಿ ಪ್ರಯತ್ನಿಸಿತು. ಅದು ಕೈಗೂಡಲಿಲ್ಲ.

ಮೇಯರ್ ಸ್ಥಾನಕ್ಕೆ ತ್ರಿವೇಣಿ,‌ ಉಮಾದೇವಿ‌ ಮತ್ತು ಕುಬೇರ ನಾಮಪತ್ರ‌‌ ಸಲ್ಲಿಸಿದ್ದರು. ಪಕ್ಷದ‌ ‌ವೀಕ್ಷಕರಾದ ಚಂದ್ರಪ್ಪ ಮತ್ತು ಜಿಲ್ಲಾ ಮುಖಂಡರು ‌ಉಳಿದಿಬ್ಬರ ನಾಮಪತ್ರ ವಾಪಸ್ ತೆಗೆಸಿದರು. ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮೇಯರ್ ಸ್ಥಾನಕ್ಕೆ ನೇರ ಹಣಾಹಣಿ ನಡೆಯಿತು.

ತ್ರಿವೇಣಿಗೆ 28 ಮತಗಳು ಬಿದ್ದರೆ,‌ ಬಿಜೆಪಿಯ ನಾಗರತ್ನಮ್ಮ ಅವರಿಗೆ 16 ಮತಗಳು ಬಂದವು. ಉಪ ಮೇಯರ್ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದಿದ್ದರಿಂದ ಜಾನಕಮ್ಮ ಅವರ ಆಯ್ಕೆ‌ ಅವಿರೋಧವಾಯಿತು.

ಕೆಪಿಸಿಸಿ ವೀಕ್ಷಕರಾದ‌‌ ಚಂದ್ರಪ್ಪ ಮಂಗಳವಾರ ಸಂಜೆಯೇ ಬಳ್ಳಾರಿ ಗೆ ಬಂದಿದ್ದರು. ಮಧ್ಯರಾತ್ರಿವರೆಗೂ ಪಾಲಿಕೆ‌ ಸದಸ್ಯರ ಜತೆ ಸಮಾಲೋಚಿಸಿ ಒಮ್ಮತದ ಅಭ್ಯರ್ಥಿ ಆಯ್ಕೆಗೆ ಶ್ರಮಿಸಿದರೂ ಪ್ರಯೋಜನ ಆಗಲಿಲ್ಲ. ಬೆಳಿಗ್ಗೆ ಪುನಃ ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಸಿದರು. ಕೊನೆ ಕ್ಷಣದವರೆಗೆ ಹಗ್ಗ‌ ಜಗ್ಗಾಟ ನಡೆಯಿತು.

ಇದಾದ‌ ಬಳಿಕ‌ ಕುಬೇರ ನಾಮಪತ್ರ ವಾಪಸ್ ಪಡೆದರು. ರಾಜ್ಯಸಭೆ‌ ಕಾಂಗ್ರೆಸ್‌ ಸದಸ್ಯ ಸಯ್ಯದ್ ನಾಸಿರ್‌ ಹುಸೇನ್ ನಾಮಪತ್ರ ವಾಪಸ್ ಪಡೆಯಲು ಉಮಾದೇವಿ ಅವರಿಗೆ ‌ಸೂಚಿಸಿದರು. ಆ ಸಂದರ್ಭದಲ್ಲಿ ಉಮಾದೇವಿ ಕಣ್ಣೀರಿಟ್ಟರು.

ಪಾಲಿಕೆಯಲ್ಲಿ‌ 39 ಸದಸ್ಯರಿದ್ದು ಕಾಂಗ್ರೆಸ್ 21, ಬಿಜೆಪಿ 13 ಸದಸ್ಯರ ಬಲ ಹೊಂದಿದೆ. ಐವರು ಪಕ್ಷೇತರರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ವಿಧಾನಸಭೆ, ವಿಧಾನಪರಿಷತ್ ಹಾಗೂ ಸಂಸದರಿಗೂ ಮತದಾನದ‌ ಹಕ್ಕಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ‌ ಕಾಂಗ್ರೆಸ್ ಶಾಸಕ ನಾಗೇಂದ್ರ ಮೇಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿದ್ದರೂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾರ ಪರ ವಹಿಸದೆ ‌ತಟಸ್ಥರಾಗಿ ಉಳಿದರು.

23ನೇ ವರ್ಷಕ್ಕೆ‌ ಮೇಯರ್ ಸ್ಥಾನ:
ಬಳ್ಳಾರಿ ನಗರದ ಮೇಯರ್ ತ್ರಿವೇಣಿ ಅವರಿಗೆ ಈಗ ಕೇವಲ 23 ವರ್ಷ. ಅತೀ ಚಿಕ್ಕ‌ ವಯಸ್ಸಿಗೆ ಅವ‌ರು‌ ನಗರದ ಪ್ರಥಮ ಪ್ರಜೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಪದವಿ ಶಿಕ್ಷಣ ಪೂರೈಸಿದ ತಕ್ಷಣ ಅವರಿಗೆ ಮೇಯರ್ ‌ಹುದ್ದೆ ಅಲಂಕರಿಸುವ ಅದೃಷ್ಟ ಒಲಿದಿದೆ. ಅಷ್ಟೇ ಅಲ್ಲ , ಅವರ ಕುಟುಂಬದ 2ನೇ ಮೇಯರ್ ಎಂಬ ಹೆಗ್ಗಳಿಕೆಯೂ ಇವರದಾಗಿದೆ.‌ ಇವರ ತಾಯಿ ಸುಶೀಲಾಬಾಯಿ ಈ ಹಿಂದೆ ನಗರದ ಮೇಯರ್ ಆಗಿದ್ದರು.

andolanait

Recent Posts

ಓದುಗರ ಪತ್ರ: ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಿ

ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…

22 mins ago

ಓದುಗರ ಪತ್ರ: ಸೈಬರ್ ವಂಚನೆ ಪ್ರಕರಣ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ

ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ೫೭,೭೩೩ ಸೈಬರ್ ಪ್ರಕರಣಗಳು ದಾಖಲಾಗಿದ್ದು, ೫,೪೭೫ ಕೋಟಿ ರೂ. ವಂಚನೆ ನಡೆದಿರುವುದಾಗಿ, ಬೆಳಗಾವಿ…

32 mins ago

ಬಾ.ನಾ.ಸುಬ್ರಹ್ಮಣ್ಯ ವಾರದ ಅಂಕಣ:  ಕೆಳಗಿನ ಕೋರ್ಟಿನಲ್ಲಿ ನಟ ದಿಲೀಪ್ ಆರೋಪ ಮುಕ್ತ;  ಅವಳೊಂದಿಗೆ v/s ದಿಲೀಪ್ ಪರ

ಜನಪ್ರಿಯ ನಟರು ಜೈಲಲ್ಲಿದ್ದರೆ, ಜಾಮೀನಿನಿಂದ ಹೊರಬಂದರೆ ಅಂತಹ ಪ್ರಕರಣದ ತೀರ್ಪಿನ ಬಗ್ಗೆ ಜನರ ಕುತೂಹಲ ಹೆಚ್ಚು. ಮಲಯಾಳ ಚಿತ್ರರಂಗದ ಹೆಸರಾಂತ…

1 hour ago

ರೈತರು ಬೆಳೆದ ಕಾಫಿ, ಅಡಿಕೆ, ಮೆಣಸು ಕಳ್ಳರ ಪಾಲು

ರಾತ್ರೋರಾತ್ರಿ ಬೆಳೆ ಕಳವು ಗಸ್ತು ಹೆಚ್ಚಳ ಸೇರಿದಂತೆ ಸೂಕ್ತ ಕ್ರಮಕ್ಕೆ ಬೆಳೆಗಾರರ ಒತ್ತಾಯ ಸಿದ್ದಾಪುರ: ವನ್ಯಜೀವಿಗಳ ಉಪಟಳ, ಹವಾಮಾನ ವೈಪರೀತ್ಯ,…

1 hour ago

ಸರಗೂರು ಸಾರಿಗೆ ಬಸ್‌ ನಿಲ್ದಾಣದಲ್ಲಿ ಅವ್ಯವಸ್ಥೆ

ದಾಸೇಗೌಡ  ಓವರ್‌ಹೆಡ್ ಟ್ಯಾಂಕ್‌ಗಳ ನಡುವೆ ತಪ್ಪಾದ ಸಂಪರ್ಕ; ಪೋಲಾಗುತ್ತಿರುವ ನೀರು; ಸಾರ್ವಜನಿಕರ ಆಕ್ರೋ ಸರಗೂರು : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್…

4 hours ago

19 ಬೇಚರಾಕ್ ಹಳ್ಳಿಗಳು ಇನ್ಮುಂದೆ ಕಂದಾಯ ಗ್ರಾಮಗಳು

ಹುಣಸೂರು ತಾಲ್ಲೂಕಿನ ಜನರ ನಾಲ್ಕು ದಶಕಗಳ ಕನಸು ನನಸು; ಗ್ರಾಮಸ್ಥರು ಫುಲ್ ಖು ಹುಣಸೂರು: ತಾಲ್ಲೂಕಿನ ೧೯ ಬೇಚರಾಕ್ ಗ್ರಾಮಗಳನ್ನು…

4 hours ago