BREAKING NEWS

ಕಾಂಗ್ರೆಸ್‌ನ 23 ವರ್ಷದ‌ ತ್ರಿವೇಣಿ ಬಳ್ಳಾರಿ ಮೇಯರ್: ಜಾನಕಮ್ಮ ಉಪ ಮೇಯರ್

ಬಳ್ಳಾರಿ: ನಗರದ ಮೇಯರ್ ಅಗಿ ಕಾಂಗ್ರೆಸ್‌ನ ತ್ರಿವೇಣಿ ಮತ್ತು ಉಪ ಮೇಯರ್ ಅಗಿ‌‌ ಜಾನಕಮ್ಮ ಬುಧವಾರ ಆಯ್ಕೆಯಾದರು.

ಮೇಯರ್ ಗದ್ದುಗೆಗಾಗಿ ಕಾಂಗ್ರೆಸ್‌ನಲ್ಲಿ ಮೂರು ದಿನಗಳಿಂದ ನಡೆದ‌ ಗುದ್ದಾಟ ಕೊನೆ ಗಳಿಗೆವರೆಗೂ ನಡೆಯಿತು. ಇದರ ಲಾಭ ಪಡೆಯಲು ಬಿಜೆಪಿ ತೆರೆಮರೆಯಲ್ಲಿ ಪ್ರಯತ್ನಿಸಿತು. ಅದು ಕೈಗೂಡಲಿಲ್ಲ.

ಮೇಯರ್ ಸ್ಥಾನಕ್ಕೆ ತ್ರಿವೇಣಿ,‌ ಉಮಾದೇವಿ‌ ಮತ್ತು ಕುಬೇರ ನಾಮಪತ್ರ‌‌ ಸಲ್ಲಿಸಿದ್ದರು. ಪಕ್ಷದ‌ ‌ವೀಕ್ಷಕರಾದ ಚಂದ್ರಪ್ಪ ಮತ್ತು ಜಿಲ್ಲಾ ಮುಖಂಡರು ‌ಉಳಿದಿಬ್ಬರ ನಾಮಪತ್ರ ವಾಪಸ್ ತೆಗೆಸಿದರು. ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮೇಯರ್ ಸ್ಥಾನಕ್ಕೆ ನೇರ ಹಣಾಹಣಿ ನಡೆಯಿತು.

ತ್ರಿವೇಣಿಗೆ 28 ಮತಗಳು ಬಿದ್ದರೆ,‌ ಬಿಜೆಪಿಯ ನಾಗರತ್ನಮ್ಮ ಅವರಿಗೆ 16 ಮತಗಳು ಬಂದವು. ಉಪ ಮೇಯರ್ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದಿದ್ದರಿಂದ ಜಾನಕಮ್ಮ ಅವರ ಆಯ್ಕೆ‌ ಅವಿರೋಧವಾಯಿತು.

ಕೆಪಿಸಿಸಿ ವೀಕ್ಷಕರಾದ‌‌ ಚಂದ್ರಪ್ಪ ಮಂಗಳವಾರ ಸಂಜೆಯೇ ಬಳ್ಳಾರಿ ಗೆ ಬಂದಿದ್ದರು. ಮಧ್ಯರಾತ್ರಿವರೆಗೂ ಪಾಲಿಕೆ‌ ಸದಸ್ಯರ ಜತೆ ಸಮಾಲೋಚಿಸಿ ಒಮ್ಮತದ ಅಭ್ಯರ್ಥಿ ಆಯ್ಕೆಗೆ ಶ್ರಮಿಸಿದರೂ ಪ್ರಯೋಜನ ಆಗಲಿಲ್ಲ. ಬೆಳಿಗ್ಗೆ ಪುನಃ ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಸಿದರು. ಕೊನೆ ಕ್ಷಣದವರೆಗೆ ಹಗ್ಗ‌ ಜಗ್ಗಾಟ ನಡೆಯಿತು.

ಇದಾದ‌ ಬಳಿಕ‌ ಕುಬೇರ ನಾಮಪತ್ರ ವಾಪಸ್ ಪಡೆದರು. ರಾಜ್ಯಸಭೆ‌ ಕಾಂಗ್ರೆಸ್‌ ಸದಸ್ಯ ಸಯ್ಯದ್ ನಾಸಿರ್‌ ಹುಸೇನ್ ನಾಮಪತ್ರ ವಾಪಸ್ ಪಡೆಯಲು ಉಮಾದೇವಿ ಅವರಿಗೆ ‌ಸೂಚಿಸಿದರು. ಆ ಸಂದರ್ಭದಲ್ಲಿ ಉಮಾದೇವಿ ಕಣ್ಣೀರಿಟ್ಟರು.

ಪಾಲಿಕೆಯಲ್ಲಿ‌ 39 ಸದಸ್ಯರಿದ್ದು ಕಾಂಗ್ರೆಸ್ 21, ಬಿಜೆಪಿ 13 ಸದಸ್ಯರ ಬಲ ಹೊಂದಿದೆ. ಐವರು ಪಕ್ಷೇತರರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ವಿಧಾನಸಭೆ, ವಿಧಾನಪರಿಷತ್ ಹಾಗೂ ಸಂಸದರಿಗೂ ಮತದಾನದ‌ ಹಕ್ಕಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ‌ ಕಾಂಗ್ರೆಸ್ ಶಾಸಕ ನಾಗೇಂದ್ರ ಮೇಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿದ್ದರೂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾರ ಪರ ವಹಿಸದೆ ‌ತಟಸ್ಥರಾಗಿ ಉಳಿದರು.

23ನೇ ವರ್ಷಕ್ಕೆ‌ ಮೇಯರ್ ಸ್ಥಾನ:
ಬಳ್ಳಾರಿ ನಗರದ ಮೇಯರ್ ತ್ರಿವೇಣಿ ಅವರಿಗೆ ಈಗ ಕೇವಲ 23 ವರ್ಷ. ಅತೀ ಚಿಕ್ಕ‌ ವಯಸ್ಸಿಗೆ ಅವ‌ರು‌ ನಗರದ ಪ್ರಥಮ ಪ್ರಜೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಪದವಿ ಶಿಕ್ಷಣ ಪೂರೈಸಿದ ತಕ್ಷಣ ಅವರಿಗೆ ಮೇಯರ್ ‌ಹುದ್ದೆ ಅಲಂಕರಿಸುವ ಅದೃಷ್ಟ ಒಲಿದಿದೆ. ಅಷ್ಟೇ ಅಲ್ಲ , ಅವರ ಕುಟುಂಬದ 2ನೇ ಮೇಯರ್ ಎಂಬ ಹೆಗ್ಗಳಿಕೆಯೂ ಇವರದಾಗಿದೆ.‌ ಇವರ ತಾಯಿ ಸುಶೀಲಾಬಾಯಿ ಈ ಹಿಂದೆ ನಗರದ ಮೇಯರ್ ಆಗಿದ್ದರು.

andolanait

Recent Posts

ವೈಯಕ್ತಿಕ ದ್ವೇಷ: ಕಾರ್ಮಿಕನನ್ನು ಕೊಲೆಗೈಯ್ದು ಶರಣಾದ ಆರೋಪಿ

ಚೆಟ್ಟಳ್ಳಿ: ಕಾಫಿ ತೋಟದ ಲೈನ್ ಮನೆಯಲ್ಲಿ ವಾಸವಿದ್ದ ಕಾರ್ಮಿಕನೊಬ್ಬ ಮತ್ತೊಬ್ಬ ಕಾರ್ಮಿಕನನ್ನು ಹತ್ಯೆಗೈದು ಪೊಲೀಸ್ ಠಾಣೆಗೆ ಬಂದು ಶರಣಾದ ಘಟನೆ…

9 hours ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ…

9 hours ago

ದುಬೈನಲ್ಲಿ ಸಿಲುಕಿರುವ ಕನ್ನಡಿಗರಿಗೆ ವಿಡಿಯೋ ಕಾಲ್‌ ಮಾಡಿ ಧೈರ್ಯ ಹೇಳಿದ ವಿಜಯೇಂದ್ರ

ಬೆಂಗಳೂರು: ಅಮೇರಿಕಾ, ಇಸ್ರೇಲ್‌-ಇರಾನ್‌ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈನಲ್ಲಿ ಸಿಲುಕಿ ಆತಂಕದಲ್ಲಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ…

9 hours ago

ಬೂದಬಾಳು ಗ್ರಾಮದ ಕೆರೆಗೆ ಬಾಗಿನ ಸಮರ್ಪಿಸಿದ ಶಾಸಕ ಎಂ.ಆರ್.ಮಂಜುನಾಥ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬರಪೀಡಿತ ಪ್ರದೇಶಗಳಲ್ಲಿ ಒಂದಾದ ಬೂದಬಾಳು ಕೆರೆಗೆ ಕಾವೇರಿ ನದಿ ಮೂಲದಿಂದ…

10 hours ago

ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ: ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ…

10 hours ago

ಹಾರ್ಮುಜ್‌ ಜನಸಂಧಿಯನ್ನು ಮುಚ್ಚಿದ ಇರಾನ್: ತೈಲ ಬೆಲೆಯಲ್ಲಿ ಭಾರೀ ಏರಿಕೆ

ಟೆಹರಾನ್:‌ ಅಮೇರಿಕಾ ಹಾಗೂ ಇಸ್ರೇಲ್‌ ದೇಶಗಳು ಇರಾನ್‌ ಜೊತೆ ನಡೆಸುತ್ತಿರುವ ಯುದ್ಧವು ಇದೀಗ ವಿಶ್ವದ ಅತ್ಯಂತ ನಿರ್ಣಾಯಕ ಇಂಧನ ಮಾರ್ಗಗಳಲ್ಲಿ…

10 hours ago