BREAKING NEWS

ಕಾಂಗ್ರೆಸ್‌ನ 23 ವರ್ಷದ‌ ತ್ರಿವೇಣಿ ಬಳ್ಳಾರಿ ಮೇಯರ್: ಜಾನಕಮ್ಮ ಉಪ ಮೇಯರ್

ಬಳ್ಳಾರಿ: ನಗರದ ಮೇಯರ್ ಅಗಿ ಕಾಂಗ್ರೆಸ್‌ನ ತ್ರಿವೇಣಿ ಮತ್ತು ಉಪ ಮೇಯರ್ ಅಗಿ‌‌ ಜಾನಕಮ್ಮ ಬುಧವಾರ ಆಯ್ಕೆಯಾದರು.

ಮೇಯರ್ ಗದ್ದುಗೆಗಾಗಿ ಕಾಂಗ್ರೆಸ್‌ನಲ್ಲಿ ಮೂರು ದಿನಗಳಿಂದ ನಡೆದ‌ ಗುದ್ದಾಟ ಕೊನೆ ಗಳಿಗೆವರೆಗೂ ನಡೆಯಿತು. ಇದರ ಲಾಭ ಪಡೆಯಲು ಬಿಜೆಪಿ ತೆರೆಮರೆಯಲ್ಲಿ ಪ್ರಯತ್ನಿಸಿತು. ಅದು ಕೈಗೂಡಲಿಲ್ಲ.

ಮೇಯರ್ ಸ್ಥಾನಕ್ಕೆ ತ್ರಿವೇಣಿ,‌ ಉಮಾದೇವಿ‌ ಮತ್ತು ಕುಬೇರ ನಾಮಪತ್ರ‌‌ ಸಲ್ಲಿಸಿದ್ದರು. ಪಕ್ಷದ‌ ‌ವೀಕ್ಷಕರಾದ ಚಂದ್ರಪ್ಪ ಮತ್ತು ಜಿಲ್ಲಾ ಮುಖಂಡರು ‌ಉಳಿದಿಬ್ಬರ ನಾಮಪತ್ರ ವಾಪಸ್ ತೆಗೆಸಿದರು. ಇದರಿಂದಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಮೇಯರ್ ಸ್ಥಾನಕ್ಕೆ ನೇರ ಹಣಾಹಣಿ ನಡೆಯಿತು.

ತ್ರಿವೇಣಿಗೆ 28 ಮತಗಳು ಬಿದ್ದರೆ,‌ ಬಿಜೆಪಿಯ ನಾಗರತ್ನಮ್ಮ ಅವರಿಗೆ 16 ಮತಗಳು ಬಂದವು. ಉಪ ಮೇಯರ್ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದಿದ್ದರಿಂದ ಜಾನಕಮ್ಮ ಅವರ ಆಯ್ಕೆ‌ ಅವಿರೋಧವಾಯಿತು.

ಕೆಪಿಸಿಸಿ ವೀಕ್ಷಕರಾದ‌‌ ಚಂದ್ರಪ್ಪ ಮಂಗಳವಾರ ಸಂಜೆಯೇ ಬಳ್ಳಾರಿ ಗೆ ಬಂದಿದ್ದರು. ಮಧ್ಯರಾತ್ರಿವರೆಗೂ ಪಾಲಿಕೆ‌ ಸದಸ್ಯರ ಜತೆ ಸಮಾಲೋಚಿಸಿ ಒಮ್ಮತದ ಅಭ್ಯರ್ಥಿ ಆಯ್ಕೆಗೆ ಶ್ರಮಿಸಿದರೂ ಪ್ರಯೋಜನ ಆಗಲಿಲ್ಲ. ಬೆಳಿಗ್ಗೆ ಪುನಃ ಖಾಸಗಿ ಹೊಟೇಲ್‌ನಲ್ಲಿ ಸಭೆ ನಡೆಸಿದರು. ಕೊನೆ ಕ್ಷಣದವರೆಗೆ ಹಗ್ಗ‌ ಜಗ್ಗಾಟ ನಡೆಯಿತು.

ಇದಾದ‌ ಬಳಿಕ‌ ಕುಬೇರ ನಾಮಪತ್ರ ವಾಪಸ್ ಪಡೆದರು. ರಾಜ್ಯಸಭೆ‌ ಕಾಂಗ್ರೆಸ್‌ ಸದಸ್ಯ ಸಯ್ಯದ್ ನಾಸಿರ್‌ ಹುಸೇನ್ ನಾಮಪತ್ರ ವಾಪಸ್ ಪಡೆಯಲು ಉಮಾದೇವಿ ಅವರಿಗೆ ‌ಸೂಚಿಸಿದರು. ಆ ಸಂದರ್ಭದಲ್ಲಿ ಉಮಾದೇವಿ ಕಣ್ಣೀರಿಟ್ಟರು.

ಪಾಲಿಕೆಯಲ್ಲಿ‌ 39 ಸದಸ್ಯರಿದ್ದು ಕಾಂಗ್ರೆಸ್ 21, ಬಿಜೆಪಿ 13 ಸದಸ್ಯರ ಬಲ ಹೊಂದಿದೆ. ಐವರು ಪಕ್ಷೇತರರು ಕಾಂಗ್ರೆಸ್ ಬೆಂಬಲಿಸಿದ್ದಾರೆ. ವಿಧಾನಸಭೆ, ವಿಧಾನಪರಿಷತ್ ಹಾಗೂ ಸಂಸದರಿಗೂ ಮತದಾನದ‌ ಹಕ್ಕಿದೆ.

ಬಳ್ಳಾರಿ ಗ್ರಾಮೀಣ ಕ್ಷೇತ್ರದ‌ ಕಾಂಗ್ರೆಸ್ ಶಾಸಕ ನಾಗೇಂದ್ರ ಮೇಯರ್ ಆಯ್ಕೆ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿದ್ದರೂ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಯಾರ ಪರ ವಹಿಸದೆ ‌ತಟಸ್ಥರಾಗಿ ಉಳಿದರು.

23ನೇ ವರ್ಷಕ್ಕೆ‌ ಮೇಯರ್ ಸ್ಥಾನ:
ಬಳ್ಳಾರಿ ನಗರದ ಮೇಯರ್ ತ್ರಿವೇಣಿ ಅವರಿಗೆ ಈಗ ಕೇವಲ 23 ವರ್ಷ. ಅತೀ ಚಿಕ್ಕ‌ ವಯಸ್ಸಿಗೆ ಅವ‌ರು‌ ನಗರದ ಪ್ರಥಮ ಪ್ರಜೆ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ. ಪದವಿ ಶಿಕ್ಷಣ ಪೂರೈಸಿದ ತಕ್ಷಣ ಅವರಿಗೆ ಮೇಯರ್ ‌ಹುದ್ದೆ ಅಲಂಕರಿಸುವ ಅದೃಷ್ಟ ಒಲಿದಿದೆ. ಅಷ್ಟೇ ಅಲ್ಲ , ಅವರ ಕುಟುಂಬದ 2ನೇ ಮೇಯರ್ ಎಂಬ ಹೆಗ್ಗಳಿಕೆಯೂ ಇವರದಾಗಿದೆ.‌ ಇವರ ತಾಯಿ ಸುಶೀಲಾಬಾಯಿ ಈ ಹಿಂದೆ ನಗರದ ಮೇಯರ್ ಆಗಿದ್ದರು.

andolanait

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

2 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago