BREAKING NEWS

ಕಾಂಗ್ರೆಸ್‌ 2ನೇ ಪಟ್ಟಿ: ಮೈಸೂರಿನ ಕೆ.ಆರ್. ಕ್ಷೇತ್ರಕ್ಕೆ ಸೋಮಶೇಖರ್- ಚಾಮರಾಜಗೆ ಹರೀಶ್ ಗೌಡ

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಮೂರನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಈಗಾಗಲೇ ಮೊದಲ ಪಟ್ಟಿಯಲ್ಲಿ 124 ಹಾಗೂ ಎರಡನೇ ಪಟ್ಟಿಯಲ್ಲಿ 42 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದ ಕಾಂಗ್ರೆಸ್‌ ಈಗ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದು, ಇನ್ನು 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ.

ಶುಕ್ರವಾರವಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರಿದ್ದ ಲಕ್ಷ್ಮಣ್‌ ಸವದಿಗೆ ಅಥಣಿ ಟಿಕೆಟ್‌ ನೀಡಲಾಗಿದೆ. ಸಿದ್ದರಾಮಯ್ಯನವರ ಎರಡು ಕ್ಷೇತ್ರ ಸ್ಪರ್ಧೆಗೆ ಸೊಪ್ಪುಹಾಕದ ಕಾಂಗ್ರೆಸ್‌ ಹೈಕಮಾಂಡ್‌ ಕೋಲಾರ ಕ್ಷೇತ್ರಕ್ಕೆ ಕೊತ್ತೂರು ಮಂಜುನಾಥ್‌ ಅವರಿಗೆ ಟಿಕೆಟ್‌ ನೀಡಿದೆ. ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಎದುರು ಪ್ರದೀಪ್ ಈಶ್ವರ್ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಚಿಕ್ಕಪೇಟೆಗೆ ಆರ್ ವಿ ದೇವರಾಜ್ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ.

ಕುಂದಗೋಳದಲ್ಲಿ ಹಾಲಿ ಶಾಸಕಿ ಕುಸುಮಾ ಶಿವಳ್ಳಿ ಅವರಿಗೆ ಟಿಕೆಟ್‌ ನೀಡಲಾಗಿದ್ದು, ಅರಸೀಕೆರೆ ಕ್ಷೇತ್ರಕ್ಕೆ ಶಿವಲಿಂಗೇಗೌಡ ಅವರಿಗೆ ಟಿಕೆಟ್‌ ಘೋಷಿಸಲಾಗಿದೆ. 16 ಹೊಸಮುಖಗಳಿಗೆ ಅವಕಾಶ ನೀಡಲಾಗಿದೆ. ಪುಲಿಕೇಶಿ ನಗರದಲ್ಲಿ ಟಿಕೆಟ್‌ ಇನ್ನೂ ಘೋಷಣೆಯಾಗಿಲ್ಲ. ಈ ಹಿನ್ನೆಲೆ ಹಾಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅತಂತ್ರರಾಗಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿಗಳ 2ನೇ ಪಟ್ಟಿ!
1. ನಿಪ್ಪಾಣಿ – ಕಾಕಾಸಾಹೇಬ್‌ ಪಾಟೀಲ್
2. ಗೋಕಾಕ್‌ – ಮಹಂತೇಶ್‌ ಕಡಾಡಿ
3. ಕಿತ್ತೂರು – ಬಾಬಾಸಾಹೇಬ್‌ ಬಿ.ಪಾಟೀಲ್
4. ಸೌದತ್ತಿ ಯಲ್ಲಮ್ಮ- ವಿಶ್ವಾಸ್‌ ವಸಂತ್‌ ವೈದ್ಯ
5. ಮುಧೋಳ (ಎಸ್‌ಸಿ)- ರಾಮಪ್ಪ ಬಾಲಪ್ಪ ತಿಮ್ಮಾಪುರ

6. ಬೀಳಗಿ- ಜೆ.ಟಿ. ಪಾಟೀಲ್
7. ಬಾದಾಮಿ- ಭೀಮಸೇನ್‌ ಬಿ. ಚಿಮ್ಮನಕಟ್ಟಿ
8. ಬಾಗಲಕೋಟೆ – ಹುಲ್ಲಪ್ಪ ವೈ. ಮೇಟಿ
9. ಬಿಜಾಪುರ ನಗರ-ಅಬ್ದುಲ್‌ ಹಮೀದ್‌ ಖಾಜಾಸಾಹೇಬ್ ಮುಶ್ರಿಫ್
10. ನಾಗಠಾಣ (ಎಸ್‌ಸಿ)- ವಿಠ್ಠಲ ಕಟಕದೊಂಡ
11. ಅಫ್ಜಲ್‌ಪುರ – ಎಂ.ವೈ. ಪಾಟೀಲ್
12. ಯಾದಗಿರಿ- ಚನ್ನರೆಡ್ಡಿ ಪಾಟೀಲ್‌ ತುಣ್ಣೂರ್
13. ಗುರಮಿಠ್‌ಕಲ್‌- ಬಾಬುರಾವ್‌ ಚಿಂಚನಸೂರ
14. ಗುಲ್ಬರ್ಗ ದಕ್ಷಿಣ – ಅಲ್ಲಮಪ್ರಭು ಪಾಟೀಲ್
15. ಬಸವಕಲ್ಯಾಣ – ವಿಜಯ್ ಧರಂ ಸಿಂಗ್
16. ಗಂಗಾವತಿ – ಇಕ್ಬಾಲ್ ಅನ್ಸಾರಿ
17. ನರಗುಂದ – ಬಿಆರ್ ಯಾವಗಲ್
18. ಧಾರವಾಡ – ವಿನಯ್ ಕುಲಕರ್ಣಿ
19. ಕಲಘಟಗಿ-ಸಂತೋಷ್ ಎಸ್. ಲಾಡ್
20. ಶಿರಸಿ – ಭೀಮಣ್ಣ ನಾಯ್ಕ್
21. ಯಲ್ಲಾಪುರ – ವಿ.ಎಸ್.ಪಾಟೀಲ್
22. ಕೂಡ್ಲಿಗಿ (ಎಸ್‌ಟಿ) – ಡಾ ಶ್ರೀನಿವಾಸ್ ಎಂ.ಟಿ
23. ಮೊಳಕಾಲ್ಮೂರು (ಎಸ್‌ಟಿ)-ಎನ್.ವೈ. ಗೋಪಾಲಕೃಷ್ಣ
24. ಚಿತ್ರದುರ್ಗ – ಕೆ.ಸಿ.ವೀರೇಂದ್ರ (ಪಪ್ಪಿ)
25. ಹೊಳಲ್ಕೆರೆ (ಎಸ್‌ಸಿ)- ಆಂಜನೇಯ ಎಚ್ 26. ಚೆನ್ನಗಿರಿ – ಬಸವರಾಜು ವಿ ಶಿವಗಂಗ
27. ತೀರ್ಥಹಳ್ಳಿ – ಕಿಮ್ಮನೆ ರತ್ನಾಕರ್
28. ಉಡುಪಿ – ಪ್ರಸಾದ್‌ ರಾಜ್ ಕಾಂಚನ್
29. ಕಡೂರು – ಆನಂದ್ ಕೆ.ಎಸ್
30. ತುಮಕೂರು ನಗರ – ಇಕ್ಬಾಲ್ ಅಹ್ಮದ್
31. ಗುಬ್ಬಿ – ಎಸ್.ಆರ್.ಶ್ರೀನಿವಾಸ್
32. ಯಲಹಂಕ – ಕೇಶವ ರಾಜಣ್ಣ ಬಿ
33. ಯಶವಂತಪುರ – ಸ್.ಬೈರಾಜ್ ಗೌಡ
34. ಮಹಾಲಕ್ಷ್ಮಿ ಲೇಔಟ್ – ಕೇಶವಮೂರ್ತಿ
35. ಪದ್ಮನಾಭ ನಗರ- ವಿ.ರಘುನಾಥ ನಾಯ್ಡು
36. ಮೇಲುಕೋಟೆ – ಸರ್ವೋದಯ ಪಾರ್ಟಿಯ ದರ್ಷನ್ ಪುಟ್ಟಣ್ಣಯ್ಯಗೆ ಬೆಂಬಲ
37. ಮಂಡ್ಯ – ಪಿ ರವಿಕುಮಾರ್
38. ಕೃಷ್ಣರಾಜಪೇಟೆ- ಬಿ.ಎಲ್.ದೇವರಾಜ್
39. ಬೇಲೂರು-ಬಿ.ಶಿವರಾಮ್
40. ಮಡಿಕೇರಿ- ಡಾ.ಮಂತರ್ ಗೌಡ
41. ಚಾಮುಂಡೇಶ್ವರಿ-ಸಿದ್ದೇಗೌಡ
42. ಕೊಳ್ಳೇಗಾಲ (ಎಸ್‌ಸಿ) – ಎ.ಆರ್.ಕೃಷ್ಣಮೂರ್ತಿ

andolanait

Recent Posts

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

35 mins ago

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

1 hour ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

2 hours ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

2 hours ago

ಆರೋಗ್ಯ ಇಲಾಖೆಯ ಅಧಿಕಾರಿ ಅಬಕಾರಿ ಡಿಸಿಯಾಗಿ ನಿಯೋಜನೆ : ನಿಯಮ ಉಲ್ಲಂಘನೆ ಆರೋಪ

ಮಂಡ್ಯ : ಇತ್ತೀಚೆಗೆ ಹಲವು ಇಲಾಖಾ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದ ಸರ್ಕಾರ ಆದೇಶ ಹೊರಡಿಸಿದ್ದು, ಅದರಲ್ಲಿ ಮಂಡ್ಯ ಜಿಲ್ಲಾ ಆರೋಗ್ಯ…

3 hours ago

ಸಿದ್ದರಾಮಯ್ಯ ಅವರೇ ಐದು ವರ್ಷ ಮುಂದುವರಿಯುವ ಆಸೆ ಇದೆ : ಶಾಸಕ ಕೆ.ಹರೀಶ್‌ ಗೌಡ

ಮೈಸೂರು : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯುವ ಆಸೆ ಇದೆ. ಹೈಕಮಾಂಡ್ ಏನೇ ತೀರ್ಮಾನ ಮಾಡಿದರೂ…

4 hours ago