BREAKING NEWS

ಕಾಂಗ್ರೆಸ್‌ನ ಮತ್ತೊಂದು ಪಟ್ಟಿ ಪ್ರಕಟ: ಈಶಾನ್ಯ ದೆಹಲಿಯಿಂದ ಕನ್ಹಯ್ಯಾ ಕುಮಾರ್‌ ಕಣಕ್ಕೆ

ನವದೆಹಲಿ: ಲೋಕಸಭೆ ಚುನಾವಣೆಗೆ ಹತ್ತು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಭಾನುವಾರ ಕಾಂಗ್ರಸ್‌ ಬಿಡುಗಡೆ ಮಾಡಿದೆ.

ಕಾಂಗ್ರಸ್‌ ಪಕ್ಷವು ಈಶಾನ್ಯ ದೆಹಲಿಯಿಂದ ಕನ್ಹಯ್ಯಾ ಕುಮಾರ್ ಮತ್ತು ಜಲಂಧರ್‌ನಿಂದ ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರನ್ನು ಕಣಕ್ಕಿಳಿಸಿದೆ.

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಕನ್ಹಯ್ಯಾ ಕುಮಾರ್ (37) ಅವರು ಈಶಾನ್ಯ ದೆಹಲಿಯಿಂದ ಬಿಜೆಪಿ ಸಂಸದರಾಗಿರುವ ಮನೋಜ್ ತಿವಾರಿ ಅವರನ್ನು ಎದುರಿಸಲಿದ್ದಾರೆ. ಮೇ 25 ರಂದು ಮತದಾನ ನಡೆಯಲಿದೆ.

2019 ರ ಲೋಕಸಭೆ ಚುನಾವಣೆಯಲ್ಲಿ ಕನ್ಹಯ್ಯಾ ಕುಮಾರ್ ಅವರು ಬಿಹಾರದ ಬೇಗುಸರಾಯ್‌ನಿಂದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದರು. ಇದರಲ್ಲಿ ಅವರು ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಗಿರಿರಾಜ್ ಸಿಂಗ್ ವಿರುದ್ಧ ಸೋತಿದ್ದರು. ನಂತರ ಅವರು 2021ರಲ್ಲಿ ಕಾಂಗ್ರೆಸ್ ಸೇರಿದರು.

ಕಾಂಗ್ರೆಸ್‌ನ ಹಿರಿಯ ನಾಯಕ ಜೈ ಪ್ರಕಾಶ್‌ ಅಗರ್ವಾಲ್‌ ನನ್ನು ಚಾಂದಿನಿ ಚೌಕದಿಂದ, ಉದಿತ ರಾಜ್‌ ವಾಯುವ್ಯ ದೆಹಲಿಯಿಂದ, ಗುರ್ಜಿತ್‌ ಸಿಂಗ್‌ ಔಜ್ಲರನ್ನು ಪಂಜಾಬ್‌ನ ಅಮೃತಸರದಿಂದ, ಕಾಂಗ್ರೆಸ್‌ ಕಣಕ್ಕಿಳಿಸಿದೆ.

ಫತೇಘರ್ ಸಾಹಿಬ್‌ನಿಂದ ಅಮರ್ ಸಿಂಗ್, ಬಟಿಂಡಾದಿಂದ ಜೀತ್ ಮೊಹಿಂದರ್ ಸಿಂಗ್ ಸಿಧು, ಸಂಗ್ರೂರ್‌ನಿಂದ ಸುಖಪಾಲ್ ಸಿಂಗ್ ಖೈರಾ ಮತ್ತು ಪಟಿಯಾಲದಿಂದ ಧರಂವೀರ್ ಗಾಂಧಿ ಅವರನ್ನು ಅಭ್ಯರ್ಥಿಗಳನ್ನಾಗಿ ಕಾಂಗ್ರೆಸ್ ಘೋಷಿಸಿದೆ. ಉತ್ತರ ಪ್ರದೇಶದ ಅಲಹಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಉಜ್ವಲ್ ರೇವತಿ ರಮಣ್ ಸಿಂಗ್ ಅವರನ್ನು ಪಕ್ಷ ಘೋಷಿಸಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

6 hours ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

8 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

9 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

10 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

10 hours ago