BREAKING NEWS

ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು : ʼʼರಾಜ್ಯದ #ATMSarkara ದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲʼʼ ಎಂದು ವಿಪಕ್ಷ ಬಿಜೆಪಿ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ʼʼಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯೇ..? ಭ್ರಷ್ಟಾಚಾರ, ವರ್ಗಾವಣೆ ದಂಧೆ, ಒಳಜಗಳ, ಕುರ್ಚಿ ತಿಕ್ಕಾಟ, ಹೀಗೆ ಕಾಂಗ್ರೆಸ್‌ ಸರ್ಕಾರದ ಸಾಲು ಸಾಲು ವೈಫಲ್ಯಗಳು ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆʼʼ ಎಂದು ವಾಗ್ದಾಳಿ ನಡೆಸಿದೆ.

ಭ್ರಷ್ಟಾಚಾರದ ಆರೋಪದಡಿ ಸೂಕ್ತ ಸಾಕ್ಷಿಗಳು ದೊರೆತರೂ, ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವ #ATMSarkara, ತನ್ನ ತಪ್ಪುಗಳ ಬಗ್ಗೆ ಪ್ರಶ್ನಿಸುವವರನ್ನು ಶಿಕ್ಷಿಸಲು ಸದಾ “ಸಿದ್ದ”ವಾಗಿರುತ್ತದೆʼʼ ಎಂದು ಬಿಜೆಪಿ ದೂರಿದೆ.

ʼʼಲಂಚಗುಳಿತನವನ್ನು ಬಹಿರಂಗಪಡಿಸಿದ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್‌ʼʼ

ʼʼಸರ್ಕಾರದ ಜನವಿರೋಧಿ ನೀತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವವರ ಮೇಲೆ ಎಫ್.ಐ.ಆರ್ ಮಾಡಿದ್ದಾಯ್ತು. ಈಗ ಸರ್ಕಾರದ ಲಂಚಗುಳಿತನವನ್ನು ಬಹಿರಂಗಪಡಿಸಿದರು ಎಂಬ ಕಾರಣಕ್ಕೆ ಗುತ್ತಿಗೆದಾರರ ವಿರುದ್ಧ ಸಹ ಎಫ್.ಐ.ಆರ್ ದಾಖಲಿಸಿ ತನ್ನ ದ್ವೇಷದ ರಾಜಕಾರಣವನ್ನು ಪ್ರದರ್ಶಿಸುತ್ತಿದೆ. ಸರ್ಕಾರದ ಈ ಭಂಡತನಕ್ಕೆ ಕೊನೆ ಎಂದು..?ʼʼ ಬಿಜೆಪಿ ಮತ್ತೊಂದು ಟ್ವೀಟ್‌ ನಲ್ಲಿ ವಾಗ್ದಾಳಿ ನಡೆಸಿದೆ.

andolanait

Recent Posts

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

5 mins ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

42 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

2 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

2 hours ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

2 hours ago