BREAKING NEWS

ಕಾಂಗ್ರೆಸ್ ಸರ್ಕಾರ ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆ: ಬಿಜೆಪಿ ವಾಗ್ದಾಳಿ

ಬೆಂಗಳೂರು : ʼʼರಾಜ್ಯದ #ATMSarkara ದಲ್ಲಿ ಶಾಸಕ-ಸಚಿವರ ಒಳಜಗಳಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲʼʼ ಎಂದು ವಿಪಕ್ಷ ಬಿಜೆಪಿ ಟೀಕಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಜೆಪಿ, ʼʼಸ್ವಪಕ್ಷೀಯ ಶಾಸಕರನ್ನೇ ನಿರ್ಲಕ್ಷಿಸುವ ಸಚಿವರುಗಳು, ಇನ್ನು ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸುತ್ತಾರೆಯೇ..? ಭ್ರಷ್ಟಾಚಾರ, ವರ್ಗಾವಣೆ ದಂಧೆ, ಒಳಜಗಳ, ಕುರ್ಚಿ ತಿಕ್ಕಾಟ, ಹೀಗೆ ಕಾಂಗ್ರೆಸ್‌ ಸರ್ಕಾರದ ಸಾಲು ಸಾಲು ವೈಫಲ್ಯಗಳು ರಾಜ್ಯದ ಅಭಿವೃದ್ಧಿಯನ್ನು ರಿವರ್ಸ್ ಗೇರ್‌ನಲ್ಲಿರಿಸಿದೆʼʼ ಎಂದು ವಾಗ್ದಾಳಿ ನಡೆಸಿದೆ.

ಭ್ರಷ್ಟಾಚಾರದ ಆರೋಪದಡಿ ಸೂಕ್ತ ಸಾಕ್ಷಿಗಳು ದೊರೆತರೂ, ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವ #ATMSarkara, ತನ್ನ ತಪ್ಪುಗಳ ಬಗ್ಗೆ ಪ್ರಶ್ನಿಸುವವರನ್ನು ಶಿಕ್ಷಿಸಲು ಸದಾ “ಸಿದ್ದ”ವಾಗಿರುತ್ತದೆʼʼ ಎಂದು ಬಿಜೆಪಿ ದೂರಿದೆ.

ʼʼಲಂಚಗುಳಿತನವನ್ನು ಬಹಿರಂಗಪಡಿಸಿದ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್‌ʼʼ

ʼʼಸರ್ಕಾರದ ಜನವಿರೋಧಿ ನೀತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸುವವರ ಮೇಲೆ ಎಫ್.ಐ.ಆರ್ ಮಾಡಿದ್ದಾಯ್ತು. ಈಗ ಸರ್ಕಾರದ ಲಂಚಗುಳಿತನವನ್ನು ಬಹಿರಂಗಪಡಿಸಿದರು ಎಂಬ ಕಾರಣಕ್ಕೆ ಗುತ್ತಿಗೆದಾರರ ವಿರುದ್ಧ ಸಹ ಎಫ್.ಐ.ಆರ್ ದಾಖಲಿಸಿ ತನ್ನ ದ್ವೇಷದ ರಾಜಕಾರಣವನ್ನು ಪ್ರದರ್ಶಿಸುತ್ತಿದೆ. ಸರ್ಕಾರದ ಈ ಭಂಡತನಕ್ಕೆ ಕೊನೆ ಎಂದು..?ʼʼ ಬಿಜೆಪಿ ಮತ್ತೊಂದು ಟ್ವೀಟ್‌ ನಲ್ಲಿ ವಾಗ್ದಾಳಿ ನಡೆಸಿದೆ.

andolanait

Recent Posts

ಕಾಂಕ್ರೋಚ್‌ಗಳ ಮೇಲೆ ಲಾಠಿಚಾರ್ಜ್:‌ ವಿಡಿಯೋ ನೋಡಲು ಟೈಮ್‌ ಇಲ್ಲ ಎಂದ ಸುಪ್ರೀಂಕೋರ್ಟ್‌

ನವದೆಹಲಿ: ನೀಟ್‌ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…

13 hours ago

ಓದುಗರ ಪತ್ರ: ರೈಲಿನಲ್ಲಿ ತಿನಿಸು ಮಾರುವವರು ವೈಯಕ್ತಿಕ ಸ್ವಚ್ಛತೆಗೂ ಗಮನ ನೀಡಲಿ

ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…

22 hours ago

ಓದುಗರ ಪತ್ರ: ‘ಗೃಹಜ್ಯೋತಿ’ ಗೊಂದಲ ನಿವಾರಿಸಿ

ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…

22 hours ago

ಓದುಗರ ಪತ್ರ: ಬರಪೀಡಿತ ಜಿಲ್ಲೆಗಳೆಂದು ಘೋಷಿಸಿ

ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…

22 hours ago

ಓದುಗರ ಪತ್ರ: ಸಂಸತ್ ಚಲೋ ತಡೆಗೆ ನಡೆದಿತ್ತೆ ಹುನ್ನಾರ?

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…

22 hours ago

ಇ-20 ಇಂಧನಕ್ಕೆ ಭಾರತ ಪ್ರಯೋಗಾಲಯವಾಯಿತೆ?!

ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್‌ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…

22 hours ago