BREAKING NEWS

ಕಾಂಗ್ರೆಸ್ ಸರ್ಕಾರ ಅಧಿಕಾರದ ದಾಹದಲ್ಲಿ ಪರಸ್ಪರ ಸ್ಪರ್ಧೆಗೆ ಇಳಿದಿದೆ : ಮಾಜಿ ಸ್ಪೀಕರ್ ಕಾಗೇರಿ‌

ಚಿತ್ರದುರ್ಗ : ರಾಜ್ಯ ಸರ್ಕಾರ ವರ್ಗಾವಣೆ ಮತ್ತು ಭ್ರಷ್ಟಾಚಾರದಲ್ಲಿ ತಲ್ಲಿನವಾಗಿದೆ. ಜನರ ಕಷ್ಟ ಸುಖಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಅಧಿಕಾರದ ದಾಹದಲ್ಲಿ ಪರಸ್ಪರ ಸ್ಪರ್ಧೆಗೆ ಇಳಿದಿದೆ ಎಂದು ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಿಡಿಕಾರಿದ್ದಾರೆ.

ಜಿಲ್ಲೆಯಲ್ಲಿ ಬರ ಅಧ್ಯಯನ ನಡೆಸಿದ ಬಳಿಕ ಕೊಳಾಳ್ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿಯಿಂದ ಬರ ಅಧ್ಯಯನ ಮಾಡುತ್ತಿದ್ದೇವೆ. ರೈತರ ಜಮೀನುಗಳಿಗೆ ತೆರಳಿ ಬೆಳಹಾನಿ ವೀಕ್ಷಿಸಿದ್ದೇವೆ. ಮಳೆ ಇಲ್ಲದೆ ಮೆಕ್ಕೆಜೋಳ ಒಣಗಿ ಹೋಗಿದೆ, ಲಕ್ಷಾಂತರ ರೂಪಾಯಿ ಖರ್ಚು ಮಾಡಿ ರೈತ ನಷ್ಠ ಅನುಭವಿಸಿದ್ದಾ‌ನೆ ಎಂದು ಬೇಸರ ಹೊರಹಾಕಿದ್ದಾರೆ.

ರಾಜ್ಯದಲ್ಲಿ ಬೆಳೆ ಇಲ್ಲದೆ ರೈತರು ಕಂಗಲಾಗಿದ್ದಾರೆ. ನಮಗೆ ಪರಿಹಾರ ನೀಡಬೇಕು ಎಂದು ರೈತರ ದ್ವನಿ ಇದೆ. ನಮ್ಮ ಪಕ್ಷದಿಂದ ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ. ಜನ, ಜಾನುವಾರುಗಳಿಗೆ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು. ನಮ್ಮ ಪ್ರವಾಸದಿಂದ ಸರ್ಕಾರ ಎಚ್ಚೆತ್ತುಕೊಂಡು, ಈಗ ಜಿಲ್ಲೆಗಳಿಗೆ 5-10 ಕೋಟಿ ರೂ.ಹಣವನ್ನು ಬಿಡುಗಡೆ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆಯಿಂದ ರೈತರಿಗೆ ಕಷ್ಟ ಆಗುತ್ತಿದ್ದು, 7 ಗಂಟೆ ವಿದ್ಯುತ್ ನೀಡುವ ಕೆಲಸ ತಕ್ಷಣದಿಂದ ಮಾಡಬೇಕು. ರಾಜ್ಯದ ಜನರ ಹಿತ ಕಾಯುವಲ್ಲಿ ಸರ್ಕಾರ ವಿಫಲವಾಗಿದ್ದು, ಈ ಸರ್ಕಾರ ಕೋಮುಭಾವನೆ ಕೆರಳಿಸುವ ಚಟುವಟಿಕೆಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದಾರೆ.

ನಮ್ಮ ಸರ್ಕಾರದಲ್ಲಿನ ಕಾಮಗಾರಿಗಳನ್ನು ಪೂಜೆ ಮಾಡಿ ಇವರು ಪೋಸ್ ನೀಡುತ್ತಿದ್ದಾರೆ. ಸಿದ್ದರಾಮಯ್ಯ 2 ದಿನ ಸಿಎಂ ಆಗಿ ಅಧಿಕಾರದಲ್ಲಿ ಇರುತ್ತೀನೋ, ಬಿಡುತ್ತೀನೋ ಎನ್ನುವಂತಾಗಿದೆ. ಈ ಮಧ್ಯ ಡಿಸಿಎಂ ಹಾಗೂ ಸಿಎಂ ನಡುವೆ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಸ್ಪರ್ಧೆ ನಡೆಯುತ್ತಿದೆ ಎಂದು ತಿವಿದಿದ್ದಾರೆ.

ರಾಜ್ಯದಲ್ಲಿ ರೈತರ ಸ್ಥಿತಿ ಗಂಭೀರವಾಗಿದೆ. ಮುಂದಿನ ಅಧಿವೇಶನದಲ್ಲಿ ನಾವು ಈ ಎಲ್ಲ ಸಮಸ್ಯೆಗಳನ್ನು ಪ್ರಸ್ತಾಪ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ವಿವಿಧ ಯೋಜನೆ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರಕ್ಕೆ ಜನಪರ ಕಾಳಜಿ ಇದೆ. 3 ತಂಡಗಳನ್ನು ರಾಜ್ಯಕ್ಕೆ ಕಳುಹಿಸಿ ವರದಿಯನ್ನು ಕೇಂದ್ರ ಪಡೆಯುತ್ತಿದೆ ಎಂದು ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರಿಗೆ ಕಾಗೇರಿ ತಿರುಗೇಟು ನೀಡಿದ್ದಾರೆ.

ರಾಜ್ಯದ ಜನರು ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರ ನೀಡಿದ್ದಾರೆ. ಇವರ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿದ್ದಾರೆ. ಮೋದಿ ಸರ್ಕಾರ ಕಾಲಕ್ಕೆ ಹಣ ಬಿಡುಗಡೆ ಮಾಡಿ, ಕರ್ನಾಟಕಕ್ಕೆ ಆರ್ಥಿಕವಾಗಿ ಅನುಕೂಲ ಮಾಡಿದೆ. ಆದರೆ ಈ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕಿದೆ ಎಂದು ಹರಿಹಾಯ್ದಿದ್ದಾರೆ.

ಕೇಂದ್ರಸವರು ಇನ್ನೂ ಕೂಡ ಹಣ ನೀಡುತ್ತಿದ್ದರೂ, ಕಾಂಗ್ರೆಸ್‌ನವರು ಅವರತ್ತಲೇ ಬೊಟ್ಟು ಮಾಡುವುದು ಬೇಜವ್ದಾರಿತನದ ಪರಮಾವಧಿ. ಜನರ ಕಷ್ಟಕ್ಕೆ ಸ್ಪಂಧಿಸುವ ಮಾನವೀಯ ಗುಣ ಇರಬೇಕಿದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ವಾಗ್ದಾಳಿ ನಡೆಸಿದ್ದಾರೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago