BREAKING NEWS

ಕಾವೇರಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಚಿಲ್ಲರೆ ರಾಜಕಾರಣ ಮಾಡುತ್ತಿದೆ: ಬಿಜೆಪಿ ಟೀಕೆ

ಬೆಂಗಳೂರು: ರಾಜ್ಯದಲ್ಲಿ ರೈತರನ್ನು ಸಂಕಷ್ಟಕ್ಕೆ ತಂದಿಟ್ಟಿರುವ ಕಾವೇರಿ ಹಾಗೂ ವಿದ್ಯುತ್ ಕೊರತೆ ಸಮಸ್ಯೆಯನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ, ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರ ಕಾವೇರಿ ವಿಚಾರದಲ್ಲಿ ತಮ್ಮ ತಪ್ಪುಗಳನ್ನು ಮರೆಮಾಚಲು ಸದಾ ಇತರರ ಮೇಲೆ ಗೂಬೆ ಕೂರಿಸುತ್ತಾ, ಚಿಲ್ಲರೆ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದೆ.

https://x.com/BJP4Karnataka/status/1707221086025175055?s=20

ಬಿಜಿಪಿ ಸರ್ಕಾರದ ಅವಧಿಯಲ್ಲಿ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕ “ಪವರ್ ಸರ್‌ಪ್ಲಸ್ ಸ್ಟೇಟ್” ಸಾಧನೆ ಮಾಡಿತ್ತು.  ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕರ್ನಾಟಕದ ಎಲ್ಲಾ ಘನತೆಗಳನ್ನು ಕಳೆದು ಹಾಳು ಮಾಡಿ ರಾಜ್ಯವನ್ನು ಕತ್ತಲಿಗೆ ದೂಡಿದೆ. ಉಚಿತ ವಿದ್ಯುತ್ ಕೊಡುತ್ತೇವೆಂದು ಕಿವಿ ಮೇಲೆ ಹೂವಿಟ್ಟ ಕಾಂಗ್ರೆಸ್ ಇದೀಗ ಹಣ ಕೊಡುತ್ತೇವೆಂದರೂ ವಿದ್ಯುತ್ ಪೂರೈಕೆ ಮಾಡದಷ್ಟು ನಿಶಕ್ತವಾಗಿದೆ ಎಂದು ಟೀಕಿಸಿದೆ.

ಸಿದ್ದರಾಮಯ್ಯ ಅವರ ಅಸಮರ್ಥ ಆಡಳಿತದಿಂದಾಗಿ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಸಂಪೂರ್ಣ ಕುಂಠಿತವಾಗಿದೆ. ಹೊರ ರಾಜ್ಯಗಳಿಂದಲೂ ವಿದ್ಯುತ್ ಖರೀದಿ ಮಾಡಲು ಕೂಡ ಸಿದ್ದರಾಮಯ್ಯ ಅವರ ಸರ್ಕಾರಕ್ಕೆ ಯೋಗ್ಯತೆ ಇಲ್ಲ. ಈಗಾಗಲೇ ವಿದ್ಯುತ್ ದರ ಏರಿಕೆಯಿಂದ ಕಂಗೆಟ್ಟಿದ್ದ ಕೃಷಿ, ಕೈಗಾರಿಕೆಗಳು ವಿದ್ಯುತ್ ಅಭಾವದಿಂದ ಮತ್ತಷ್ಟು ಕುಗ್ಗಿ ಹೋಗಿವೆ. ಇದರ ನಡುವೆ ರಾಜ್ಯಕ್ಕೆ ಲೋಡ್ ಶೆಡ್ಡಿಂಗ್ ಭೂತ ಆಗಲೇ ಆವರಿಸಿದೆ.  ಇದೇ ಕಾಂಗ್ರೆಸ್ಸಿನ ಕತ್ತಲು ರಾಜ್ಯದ ಗ್ಯಾರಂಟಿ ಎಂದು ಕಿಡಿಕಾರಿದೆ.

andolanait

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

2 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

2 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

3 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

12 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

12 hours ago