ಬೆಂಗಳೂರು: ಚುನಾವಣ ಪೂರ್ವದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುವುದಾಗಿ ಶುಕ್ರವಾರ ಘೋಷಿಸಿದ ಬೆನ್ನಲ್ಲೇ ಬಿಜೆಪಿಗೆ ಸರಣಿ ಟ್ವೀಟ್ ಗಳ ಮೂಲಕ ಕಾಂಗ್ರೆಸ್ ಟಾಂಗ್ ನೀಡಿದೆ.
”ನಳಿನ್ ಕುಮಾರ್ ಕಟೀಲ್ ಅವರೇ,ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬಸವರಾಜ್ ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ! ಶೋಭಾ ಕರಂದ್ಲಾಜೆ ಅವರೇ, ನಿಮಗೂ ಪ್ರಯಾಣ ಫ್ರೀ!, ಸಿ.ಟಿ.ರವಿ ಅವರೇ, ನಿಮ್ಮ ಮನೆಯವರಿಗೂ 2000 ರೂ.ಫ್ರೀ!.ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)!ಇದು ನಮ್ಮ ಗ್ಯಾರಂಟಿ.” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
”ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು.ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅತ್ಯಂತ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾತನಾಡಿ ಯೋಜನೆಗಳನ್ನು ಹೆಚ್ಚಿನ ಷರತ್ತುಗಳಿಲ್ಲದೇ ಜಾರಿ ಮಾಡುವುದಾಗಿ ಘೋಷಿಸಿದರು. ಸಂಪುಟ ಸಚಿವರು ಈ ವೇಳೆ ಹಾಜರಿದ್ದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…