BREAKING NEWS

ಕಾಂಗ್ರೆಸ್‌ಗೆ ‘ಭಾರತ್ ಜೋಡೋ’, ಬಿಜೆಪಿ-ಆರ್‌ಎಸ್‌ಎಸ್‌ಗೆ ‘ಭಾರತ್ ತೋಡೋ’ ಸಿದ್ಧಾಂತವಿದೆ: ರಾಗಾ

ಪಾಟ್ನಾ: ಪ್ರತಿಪಕ್ಷಗಳ ಸಭೆಗೂ ಮುನ್ನ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಶುಕ್ರವಾರ, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಹೋರಾಡಲು ಒಗ್ಗಟ್ಟಿನಿಂದ ಇರುವಂತೆ ತಮ್ಮ ಪಕ್ಷದ ನಾಯಕರಿಗೆ ಮನವಿ ಮಾಡಿದರು ಮತ್ತು ‘ಭಾರತ್ ಜೋಡೋ’ ನಮ್ಮ ನಂಬಿಕೆ. ಆದರೆ, ಕಾಂಗ್ರೆಸ್‌ಗೆ ವ್ಯತಿರಿಕ್ತವಾಗಿ ಬಿಜೆಪಿ-ಆರ್‌ಎಸ್‌ಎಸ್ ‘ಭಾರತ್ ತೋಡೋ’ ಸಿದ್ಧಾಂತವನ್ನು ಹೊಂದಿದೆ ಎಂದು ದೂರಿದರು.

2024ರ ಲೋಕಸಭಾ ಚುನಾವಣೆಗೆ ಕಾರ್ಯತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಇಂದು ಪಾಟ್ನಾದಲ್ಲಿ ಸಭೆ ನಡೆಸಲಿವೆ. ಸಭೆಗೆ ಹಾಜರಾಗಲು ಪಾಟ್ನಾಗೆ ಆಗಮಿಸಿರುವ ರಾಹುಲ್ ಗಾಂಧಿ, ಪಕ್ಷದ ಕಚೇರಿಯಲ್ಲಿ ಮಾತನಾಡಿದರು. ನಾವು ಬಿಹಾರವನ್ನು ಗೆದ್ದರೆ ಇಡೀ ದೇಶವನ್ನು ಗೆಲ್ಲುತ್ತೇವೆ ಎಂದು ಹೇಳಿದರು.
https://twitter.com/ANI/status/1672117128621858817?s=20
‘ಸದ್ಯ ಭಾರತದಲ್ಲಿ ಸಿದ್ಧಾಂತದ ಹೋರಾಟ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷವು ‘ಭಾರತ್ ಜೋಡೋ’ (ಭಾರತವನ್ನು ಒಂದುಗೂಡಿಸುವ) ಸಿದ್ಧಾಂತವನ್ನು ಹೊಂದಿದ್ದರೆ, ಬಿಜೆಪಿ-ಆರ್‌ಆರ್‌ಎಸ್ ‘ಭಾರತ್ ತೋಡೋ’ (ಭಾರತದವನ್ನು ಒಡೆಯುವ) ಸಿದ್ಧಾಂತವನ್ನು ಹೊಂದಿದೆ. ನಾವು ದೇಶದಲ್ಲಿ ಪ್ರೀತಿಯನ್ನು ಹರಡುತ್ತೇವೆ ಮತ್ತು ಮೊಹಬ್ಬತ್ ಬಗ್ಗೆ ಮಾತನಾಡುತ್ತಿದ್ದೇವೆ. ಆದರೆ, ಬಿಜೆಪಿ-ಆರ್‌ಎಸ್‌ಎಸ್ ದ್ವೇಷ ಮತ್ತು ಸಮಾಜವನ್ನು ವಿಭಜಿಸುವ ಬಗ್ಗೆ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕ ಹೇಳಿದರು.

‘ಭಾರತ್ ಜೋಡೋ ಯಾತ್ರೆ ನಡೆಯುತ್ತಿರುವಾಗ ನಾವು ಹೋದಲ್ಲೆಲ್ಲಾ ಬಿಹಾರದ ಜನ ಸಿಗುತ್ತಿದ್ದರು. ನನ್ನನ್ನು ಭೇಟಿಯಾಗಲು ಬರುತ್ತಿದ್ದವರನ್ನು ನಾನು ಎಲ್ಲಿಯವರು ಎಂದು ಕೇಳಿದಾಗ, ಅವರು ಬಿಹಾರ ಎಂದು ನನಗೆ ತಿಳಿಸಿದರು. ನಾನು ಕೇರಳ, ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಂಜಾಬ್ ಮತ್ತು ಕಾಶ್ಮೀರದಲ್ಲಿ ನಡೆದಿದ್ದೇನೆ ಮತ್ತು ಬಿಹಾರದ ಜನರನ್ನು ನಾನು ಎಲ್ಲೆಡೆ ಕಂಡಿದ್ದೇನೆ’ ಎಂದು ಹೇಳಿದರು.

2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಬಿಜೆಪಿಯನ್ನು ಸೋಲಿಸಲಿವೆ. ದ್ವೇಷವನ್ನು ದ್ವೇಷದಿಂದ ಎದುರಿಸಲು ಸಾಧ್ಯವಿಲ್ಲ ಎಂದು ನಿಮಗೆ ತಿಳಿದಿದೆ. ಅದನ್ನು ಪ್ರೀತಿಯಿಂದ ಮಾತ್ರ ಸೋಲಿಸಬಹುದು. ದೇಶವನ್ನು ಒಗ್ಗೂಡಿಸಲು ಮತ್ತು ಪ್ರೀತಿಯನ್ನು ಹರಡಲು ಕಾಂಗ್ರೆಸ್ ಶ್ರಮಿಸುತ್ತಿದೆ. ಅದಕ್ಕಾಗಿಯೇ ನಾವು ಬಿಹಾರಕ್ಕೆ ಬಂದಿದ್ದೇವೆ ಏಕೆಂದರೆ, ಕಾಂಗ್ರೆಸ್‌ನ ಡಿಎನ್‌ಎ ಬಿಹಾರದಲ್ಲಿದೆ ಎಂದು ಅವರು ಹೇಳಿದರು.

‘ಕರ್ನಾಟಕದಲ್ಲಿ ಬಿಜೆಪಿ ನಾಯಕರು ಭಾಷಣ ಮಾಡಿದರು ಮತ್ತು ಎಲ್ಲೆಡೆ ಹೋದರು. ಆದರೆ, ಫಲಿತಾಂಶವನ್ನು ನೀವು ನೋಡಿದಿರಿ. ‘ಕಾಂಗ್ರೆಸ್ ಒಗ್ಗಟ್ಟಾಗಿ ನಿಂತ ತಕ್ಷಣ ಕರ್ನಾಟಕದಲ್ಲಿ ಬಿಜೆಪಿ ಕಣ್ಮರೆಯಾಯಿತು’. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಎಲ್ಲಿಯೂ ಇರುವುದಿಲ್ಲ ಮತ್ತು ಕಾಂಗ್ರೆಸ್ ಗೆಲ್ಲುತ್ತದೆ ಎಂದು ನಾನು ಈ ಹಂತದಿಂದಲೇ ಹೇಳುತ್ತಿದ್ದೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದ ಜನರನ್ನು ಒಗ್ಗೂಡಿಸಲು ಮುಂದಾಗಿರುವವರು ರಾಹುಲ್ ಗಾಂಧಿ. ಅವರು ದೇಶದ ಪ್ರತಿಯೊಂದು ರಾಜಕೀಯ ಪಕ್ಷಗಳೊಂದಿಗೆ ಮಾತನಾಡಲು ಮುಂದಾದರು ಎಂದು ಹೇಳಿದರು.

‘ನಾವು ಪಾಟ್ನಾದಲ್ಲಿ 20 ವಿರೋಧ ಪಕ್ಷಗಳು ಸಭೆ ಸೇರುತ್ತಿದ್ದೇವೆ ಮತ್ತು 2024ರಲ್ಲಿ ನಾವು ಒಟ್ಟಾಗಿ ಹೋರಾಡುತ್ತೇವೆ. ನಮ್ಮ ನಡುವಿನ ಆಂತರಿಕ ಭಿನ್ನಭಿಪ್ರಾಯಗಳನ್ನು ತೆಗೆದುಹಾಕಲು ಬಿಹಾರದ ಜನರನ್ನು ಕೇಳಲು ಬಯಸುತ್ತೇನೆ. ನಾವು ಬಿಹಾರವನ್ನು ಗೆದ್ದರೆ ನಾವು ಇಡೀ ದೇಶವನ್ನು ಗೆಲ್ಲುತ್ತೇವೆ’ ಎಂದು ಖರ್ಗೆ ಹೇಳಿದರು.

ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಪಾಟ್ನಾ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಪಕ್ಷದ ಬೆಂಬಲಿಗರು ಉಪಸ್ಥಿತರಿದ್ದರು.

ಇಬ್ಬರೂ ನಾಯಕರು ನೇರವಾಗಿ ಕಾಂಗ್ರೆಸ್ ಕಚೇರಿ ‘ಸದಕತ್ ಆಶ್ರಮ’ಕ್ಕೆ ಆಗಮಿಸಿದರು. ಅಲ್ಲಿ ಅವರನ್ನು ರಾಜ್ಯದ ಪಕ್ಷದ ಮುಖಂಡರು ಸ್ವಾಗತಿಸಿದರು. ‘ಮೊಹಬ್ಬತ್ ಕಿ ದುಕಾನ್’ ಘೋಷಣೆಯನ್ನು ಎತ್ತಿ ತೋರಿಸುವ ಹೆಚ್ಚಿನ ಸಂಖ್ಯೆಯ ಹೋರ್ಡಿಂಗ್‌ಗಳು ಮತ್ತು ಇತರ ಪ್ರದರ್ಶನ ಫಲಕಗಳನ್ನು ಪಕ್ಷವು ಪಾಟ್ನಾದಲ್ಲಿ ಸ್ಥಾಪಿಸಿದೆ.

andolanait

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

11 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

11 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

11 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

12 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

13 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

13 hours ago