BREAKING NEWS

ಕಾಂಗ್ರೆಸ್‌ ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು, ʼಕಾಸಿಗಾಗಿ ಪೋಸ್ಟಿಂಗ್ʼ: ಎಚ್‌ಡಿಕೆ

ಬೆಂಗಳೂರು: ಅಧಿಕಾರಕ್ಕೆ ಬಂದ ಒಂದು ತಿಂಗಳಲ್ಲೇ ಕಾಂಗ್ರೆಸ್ ಸರ್ಕಾರದಲ್ಲಿ ವರ್ಗಾವಣೆ ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಪಂಚಖಾತ್ರಿ ಗ್ಯಾರಂಟಿಗಳ ಜೊತೆಗೆ ಕಾಸಿಗಾಗಿ ಪೋಸ್ಟಿಂಗ್ ಎಂಬ ಆರನೇ ಗ್ಯಾರಂಟಿಯನ್ನು ಖಾತ್ರಿಗೊಳಿಸಿದೆ ಎಂದು ಆಪಾದಿಸಿದ್ದಾರೆ.

ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರ್ಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎಂದು ಹೇಳಿದ್ದಾರೆ. ಸ್ವತಃ ಮುಖ್ಯಮಂತ್ರಿಗಳ ಕಚೇರಿಯಲ್ಲಿ ವರ್ಗಾವರ್ಗಿ ದಂಧೆಗೆ ಹುಂಡಿ ಇದೆ ಎನ್ನುವುದು ದಾಖಲೆ ಸಮೇತ ಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿಯವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ.

ಮುಖ್ಯಮಂತ್ರಿ ಕಚೇರಿಯಲ್ಲಿ ಏನು ನಡೆಯುತ್ತಿದೆ ಎಂದು ಪ್ರಶ್ನಿಸಿದ ಅವರು ರಾಜ್ಯದ ಮುಖ್ಯಮಂತ್ರಿ ಕಚೇರಿಯೋ ಅಥವಾ ಭ್ರಷ್ಟಾಚಾರದ ಕರ್ನಾಟಕವೋ ಎಂದು ವಾಗ್ದಾಳಿ ನಡೆಸಿದ್ದಾರೆ. ಒಂದು ಹುದ್ದೆಗೆ ನಾಲ್ವರಿಗೆ ಶಿಫಾರಸು ಮಾಡಿರುವ ಪತ್ರದ ಹಿಂದಿರುವ ಆ ಅತೀಂದ್ರ ಶಕ್ತಿ ಯಾವುದು ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಮೂರೊಪ್ಪತ್ತು ಶಿಫಾರಸು ಪತ್ರಗಳನ್ನು ಟೈಪಿಸಿ ಮುಖ್ಯಮಂತ್ರಿ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್ ಕೋಟಾ ನಿಯಂತ್ರಣ ಮಾಡುತ್ತಿರುವ ಆ ರಿಮೋಟ್ ಕಂಟ್ರೋಲ್ ಬಗ್ಗೆ ಜನಕ್ಕೆ ಅರ್ಥವಾಗಬೇಕಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೊದಲ ದಿನದಿಂದಲೇ ಕಾಸಿಗಾಗಿ ಪೋಸ್ಟಿಂಗ್ ದಂಧೆ ಶುರುವಾಗಿದೆ. ಸರ್ಕಾರದ ಕೆಲಸ ದೇವರ ಕೆಲಸ ಎನ್ನುವುದರ ಬದಲು ಬಂದಿದ್ದನ್ನು ಬಿಡದೆ ಬಾಚಿಕೋ ಎಂಬುದು ಈ ಸರ್ಕಾರದ ಧ್ಯೇಯ ನೀತಿಯಾಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ ಬಿಟ್ಟಿ ಭಾಗ್ಯದ ಬೆಲ್ಲದ ಆಮಿಷವೊಡ್ಡಿ ಲೂಟಿ ಪರ್ವಕ್ಕೆ ಹುಂಡಿ ಇಡಲಾಗಿದೆ ಎಂದು ಅವರು ಆರೋಪಗಳ ಸುರಿಮಳೆಗೈದಿದ್ದಾರೆ.

andolanait

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

18 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

18 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

18 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago