BREAKING NEWS

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಾಗಲಕೋಟೆ : ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಕೆಲವರು ಮುಳುಗುವ ಹಡಗು ಹತ್ತಿದ್ದಾರೆ‌. ಇಲ್ಲಿ ಇದ್ದಿದ್ದರೆ ಅವರು ದಡ ಸೇರುತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮುಧೋಳದಲ್ಲಿ ಗೋವಿಂದ ಕಾರಜೋಳ ಅವರ ಪರ ರೋಡ್ ಶೋ ನಡೆಸಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಅಭೂತಪೂರ್ವ ಜನ ಬೆಂಬಲ ಬಿಜೆಪಿಗೆ ದೊರೆತಿದೆ. ಕಾರಜೋಳ ಅವರು ಒಬ್ಬ ಸಚಿವರಾಗಿ ಕಳೆದ ಮೂವತ್ತು ವರ್ಷದಿಂದ ಸೇವೆ ಸಲ್ಲಿಸಿದ್ದಾರೆ. ಲೋಕೋಪಯೋಗಿ, ನೀರಾವರಿ, ಸಮಾಜ ಕಲ್ಯಾಣ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.
ಉತ್ತರ ಕರ್ನಾಟಕ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ : ಕೃಷ್ಣಾ ಮೇಲೆ ಆಣೆ ಮಾಡಿದ ಕಾಂಗ್ರೆಸ್ ನವರು ಏನೂ ಮಾಡಲಿಲ್ಲ. ಉತ್ತರ ಕರ್ನಾಟಕ ಜನರಿಗೆ ಮೋಸ ಮಾಡಿದರು. ಭೂಮಿ ಕಳೆದುಕೊಂಡ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿದರು, ರೈತರಿಗೆ ಪರಿಹಾರ ನೀಡಲು ನಮ್ಮ ಕಾರಜೋಳ ಅವರು ಸಚಿವರಾಗಿ ಬರಬೇಕಾಯಿತು. ನಾನು ಸಚಿವ ಸಂಪುಟದ ಉಪ ಸಮಿತಿ ಮಾಡಿ ಎಲ್ಲರಿಗೂ ಸಮಾನವಾದ ಪರಿಹಾರ ನೀಡಿದ್ದು, ಭೂಮಿ ಕಳೆದುಕೊಂಡವರಿಗೆ ಸಮಾನ ಪರಿಹಾರ ನೀಡಲಾಗಿದೆ. ಈ ಭಾಗದಲ್ಲಿ ಏತ ನೀರಾವರಿ ಮಾಡುವ ಮೂಲಕ ಮುಧೋಳ ಅಭಿವೃದ್ಧಿ ಮಾಡಲಾಗಿದೆ ಎಂದರು.
ಬಿಜೆಪಿ ಸುನಾಮಿ : ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಮತ್ತೆ ಬಿಜೆಪಿ ಸರ್ಕಾರ ನೂರಕ್ಕೆ ನೂರು ಬರುತ್ತದೆ. ಕಾಂಗ್ರೆಸ್ ನವರು ನೀಡುತ್ತಿರುವುದು ಗ್ಯಾರೆಂಟಿ ಕಾರ್ಡ್ ಅಲ್ಲ, ಅದು ವಿಜಿಟಿಂಗ್ ಕಾರ್ಡ್, ಅದು ಮುಂದೆ ಗಳಗಂಟಿ ಆಗುತ್ತದೆ. ಕಾರಜೋಳ ಅವರು ರಾಜ್ಯ ಸುತ್ತಬೇಕಿದೆ. ನಾವು ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಒಳ ಮೀಸಲಾತಿ ನೀಡಿದ್ದೇವೆ. ಒಕ್ಕಲಿಗ ಲಿಂಗಾಯತರ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಕಾರಜೋಳ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ಕಾಂಗ್ರೆಸ್ ನವರು ಮುಂದಿನ ಬಾರಿ ಅರ್ಜಿ ಹಾಕದಂತೆ ಮಾಡಬೇಕು ಎಂದು ಹೇಳಿದರು.

lokesh

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

3 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

3 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

3 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

3 hours ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

3 hours ago