BREAKING NEWS

ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬಾಗಲಕೋಟೆ : ಕರ್ನಾಟಕದಲ್ಲಿ ಕಾಂಗ್ರೆಸ್ ಮುಳುಗುವ ಹಡಗು. ಕೆಲವರು ಮುಳುಗುವ ಹಡಗು ಹತ್ತಿದ್ದಾರೆ‌. ಇಲ್ಲಿ ಇದ್ದಿದ್ದರೆ ಅವರು ದಡ ಸೇರುತ್ತಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮುಧೋಳದಲ್ಲಿ ಗೋವಿಂದ ಕಾರಜೋಳ ಅವರ ಪರ ರೋಡ್ ಶೋ ನಡೆಸಿದ ನಂತರ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಕರ್ನಾಟಕದಲ್ಲಿ ಅಭೂತಪೂರ್ವ ಜನ ಬೆಂಬಲ ಬಿಜೆಪಿಗೆ ದೊರೆತಿದೆ. ಕಾರಜೋಳ ಅವರು ಒಬ್ಬ ಸಚಿವರಾಗಿ ಕಳೆದ ಮೂವತ್ತು ವರ್ಷದಿಂದ ಸೇವೆ ಸಲ್ಲಿಸಿದ್ದಾರೆ. ಲೋಕೋಪಯೋಗಿ, ನೀರಾವರಿ, ಸಮಾಜ ಕಲ್ಯಾಣ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ ಎಂದರು.
ಉತ್ತರ ಕರ್ನಾಟಕ ಜನರಿಗೆ ಕಾಂಗ್ರೆಸ್ ಮೋಸ ಮಾಡಿದೆ : ಕೃಷ್ಣಾ ಮೇಲೆ ಆಣೆ ಮಾಡಿದ ಕಾಂಗ್ರೆಸ್ ನವರು ಏನೂ ಮಾಡಲಿಲ್ಲ. ಉತ್ತರ ಕರ್ನಾಟಕ ಜನರಿಗೆ ಮೋಸ ಮಾಡಿದರು. ಭೂಮಿ ಕಳೆದುಕೊಂಡ ಪರಿಹಾರ ನೀಡುವಲ್ಲಿ ತಾರತಮ್ಯ ಮಾಡಿದರು, ರೈತರಿಗೆ ಪರಿಹಾರ ನೀಡಲು ನಮ್ಮ ಕಾರಜೋಳ ಅವರು ಸಚಿವರಾಗಿ ಬರಬೇಕಾಯಿತು. ನಾನು ಸಚಿವ ಸಂಪುಟದ ಉಪ ಸಮಿತಿ ಮಾಡಿ ಎಲ್ಲರಿಗೂ ಸಮಾನವಾದ ಪರಿಹಾರ ನೀಡಿದ್ದು, ಭೂಮಿ ಕಳೆದುಕೊಂಡವರಿಗೆ ಸಮಾನ ಪರಿಹಾರ ನೀಡಲಾಗಿದೆ. ಈ ಭಾಗದಲ್ಲಿ ಏತ ನೀರಾವರಿ ಮಾಡುವ ಮೂಲಕ ಮುಧೋಳ ಅಭಿವೃದ್ಧಿ ಮಾಡಲಾಗಿದೆ ಎಂದರು.
ಬಿಜೆಪಿ ಸುನಾಮಿ : ರಾಜ್ಯದಲ್ಲಿ ಬಿಜೆಪಿ ಸುನಾಮಿ ಎದ್ದಿದೆ. ಮತ್ತೆ ಬಿಜೆಪಿ ಸರ್ಕಾರ ನೂರಕ್ಕೆ ನೂರು ಬರುತ್ತದೆ. ಕಾಂಗ್ರೆಸ್ ನವರು ನೀಡುತ್ತಿರುವುದು ಗ್ಯಾರೆಂಟಿ ಕಾರ್ಡ್ ಅಲ್ಲ, ಅದು ವಿಜಿಟಿಂಗ್ ಕಾರ್ಡ್, ಅದು ಮುಂದೆ ಗಳಗಂಟಿ ಆಗುತ್ತದೆ. ಕಾರಜೋಳ ಅವರು ರಾಜ್ಯ ಸುತ್ತಬೇಕಿದೆ. ನಾವು ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಒಳ ಮೀಸಲಾತಿ ನೀಡಿದ್ದೇವೆ. ಒಕ್ಕಲಿಗ ಲಿಂಗಾಯತರ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಕಾರಜೋಳ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು. ಕಾಂಗ್ರೆಸ್ ನವರು ಮುಂದಿನ ಬಾರಿ ಅರ್ಜಿ ಹಾಕದಂತೆ ಮಾಡಬೇಕು ಎಂದು ಹೇಳಿದರು.

lokesh

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

6 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

6 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

6 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

6 hours ago