ತೆಲಂಗಾಣ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.
ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಪ್ರಮುಖರು ಭಾಗಿಯಾಗಿದ್ದರು.
ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್ ಮತ್ತು ಬ್ಯಾನರ್ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.
ಈ ಕಟೌಟ್ ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ಗಾಂಧಿ…