BREAKING NEWS

ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿ ಕಾಂಗ್ರೆಸ್​ ಯಡವಟ್ಟು

ತೆಲಂಗಾಣ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್​ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್​ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ನ ಪ್ರಮುಖರು ಭಾಗಿಯಾಗಿದ್ದರು.

ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್​ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್​ ಮತ್ತು ಬ್ಯಾನರ್​​ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್​ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.

ಈ ಕಟೌಟ್ ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್​ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

lokesh

Recent Posts

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

54 mins ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

1 hour ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

2 hours ago

‘ಟಿವಿಕೆ ಪ್ರವೇಶದಿಂದ ರಾಜಕೀಯ ಉದ್ವಿಗ್ನ’ : ದಳಪತಿ ವಿಜಯ್‌

ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…

2 hours ago

ಜಿಎಸ್‌ಟಿ, ಐಟಿ ಪಾವತಿದಾರರು ‘ಗ್ರಹಲಕ್ಷ್ಮಿʼಗೆ ಅರ್ಹರಲ್ಲ : ಸಚಿವೆ ಲಕ್ಷ್ಮಿ

ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…

2 hours ago

ಸಾಮಾಜಿಕ ಜಾಲತಾಣ ಬಳಕೆಯಿಂದ ದುಷ್ಪರಿಣಾಮ : ಹರೆಯದವರ ಬಳಕೆ ನಿಷೇಧಕ್ಕೆ ಚಿಂತನೆ

ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…

2 hours ago