BREAKING NEWS

ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿ ಕಾಂಗ್ರೆಸ್​ ಯಡವಟ್ಟು

ತೆಲಂಗಾಣ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್​ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್​ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ನ ಪ್ರಮುಖರು ಭಾಗಿಯಾಗಿದ್ದರು.

ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್​ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್​ ಮತ್ತು ಬ್ಯಾನರ್​​ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್​ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.

ಈ ಕಟೌಟ್ ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್​ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

lokesh

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

8 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

11 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

11 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

12 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

12 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

12 hours ago