ತೆಲಂಗಾಣ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.
ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್ನ ಪ್ರಮುಖರು ಭಾಗಿಯಾಗಿದ್ದರು.
ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್ ಮತ್ತು ಬ್ಯಾನರ್ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.
ಈ ಕಟೌಟ್ ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್ ಪರೀಕ್ಷೆ ಅಕ್ರಮ ಹಾಗೂ ಜಂತರ್ ಮಂತರ್ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ…
ನವದೆಹಲಿ: ಇಂದಿನಿಂದ ಸಂಸತ್ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.…
ಅರ್ಹರು ಮತ ಹಕ್ಕು ಕಳೆದುಕೊಳ್ಳುವ ಆತಂಕ; ಚುನಾವಣಾ ಆಯೋಗಕ್ಕೆ ‘ಜಾಗೃತ ಕರ್ನಾಟಕ’ ಸಮಯೋಚಿತ ಪ್ರಶ್ನೆ ಕರ್ನಾಟಕದಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಈವಾರ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಅಂದ ಹಾಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಈಗಾಗಲೇ…