BREAKING NEWS

ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿ ಕಾಂಗ್ರೆಸ್​ ಯಡವಟ್ಟು

ತೆಲಂಗಾಣ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್​ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್​ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ನ ಪ್ರಮುಖರು ಭಾಗಿಯಾಗಿದ್ದರು.

ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್​ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್​ ಮತ್ತು ಬ್ಯಾನರ್​​ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್​ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.

ಈ ಕಟೌಟ್ ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್​ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

lokesh

Recent Posts

ಮಂಡ್ಯ | ಸೆಸ್ಕಾಂ ಎಇ ಲೋಕಾ ಬಲೆಗೆ

ಮಂಡ್ಯ : ಲಂಚ ಪಡೆಯುತ್ತಿದ್ದಾಗ ಸೆಸ್ಕಾಂ ಉಪ ವಿಭಾಗದ ಸಹಾಯಕ ಇಂಜಿನಿಯರ್ (ಎಇ) ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ…

10 mins ago

ಬಲಪ್ರಯೋಗದ ಮೂಲಕ ಜನರ ಧ್ವನಿ ಅಡಗಿಸಲು ಯತ್ನ: ಮಲ್ಲಿಕಾರ್ಜುನ ಖರ್ಗೆ ಆಕ್ರೋಶ

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್‌ ಪರೀಕ್ಷೆ ಅಕ್ರಮ ಹಾಗೂ ಜಂತರ್‌ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ…

5 hours ago

ಸಂಸತ್‌ ಮುಂಗಾರು ಅಧಿವೇಶನ: ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ

ನವದೆಹಲಿ: ಇಂದಿನಿಂದ ಸಂಸತ್‌ ಅಧಿವೇಶನ ಆರಂಭವಾಗಲಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿಪಕ್ಷಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.…

8 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ: ಜಾಗೃತ ಕರ್ನಾಟಕ ಆತಂಕ

ಅರ್ಹರು ಮತ ಹಕ್ಕು ಕಳೆದುಕೊಳ್ಳುವ ಆತಂಕ; ಚುನಾವಣಾ ಆಯೋಗಕ್ಕೆ ‘ಜಾಗೃತ ಕರ್ನಾಟಕ’ ಸಮಯೋಚಿತ ಪ್ರಶ್ನೆ ಕರ್ನಾಟಕದಲ್ಲಿ ಮತದಾನದ ಹಕ್ಕು ಕಳೆದುಕೊಳ್ಳುವ…

9 hours ago

ವಾಂಗ್ಚುಕ್ ಹೋರಾಟ ಕುರಿತು ನಿರ್ಲಕ್ಷ್ಯ ಸಲ್ಲದು

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ…

12 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂಪುಟ ವಿಸ್ತರಣೆ ನಿರೀಕ್ಷೆ: ಸಂಕಟ ಪರೀಕ್ಷೆ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಈವಾರ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಅಂದ ಹಾಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಈಗಾಗಲೇ…

12 hours ago