BREAKING NEWS

ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿ ಕಾಂಗ್ರೆಸ್​ ಯಡವಟ್ಟು

ತೆಲಂಗಾಣ : ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿರುವ ಫೋಟೋ ಒಂದು ದೇಶದಲ್ಲಿ ಸಂಚಲನ ಮೂಡಿಸಿದೆ. ತೆಲಂಗಾಣ ಕಾಂಗ್ರೆಸ್​ ಈ ನಡೆ ವಿರುದ್ಧ ಬಿಜೆಪಿ ನಿಗಿನಿಗಿ ಕೆಂಡಕಾರಿದೆ.

ಮುಂಬರುವ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ನಿನ್ನೆ ಕಾಂಗ್ರೆಸ್​ ಬೃಹತ್ ಸಮಾವೇಶ ನಡೆಸಿತ್ತು. ಈ ವೇಳೆ ಕರ್ನಾಟಕ ಚುನಾವಣೆಯಲ್ಲಿ ಗ್ಯಾರಂಟಿ ಅಸ್ತ್ರಗಳನ್ನು ಪ್ರಯೋಗಿಸಿದಂತೆ, ಪ್ರಮುಖ 6 ಉಚಿತ ಯೋಜನೆಗಳನ್ನು ಕಾಂಗ್ರೆಸ್ ಘೋಷಣೆ ಮಾಡಿದೆ. ಈ ಸಂದರ್ಭದಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ, ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿದಂತೆ ಕಾಂಗ್ರೆಸ್​ನ ಪ್ರಮುಖರು ಭಾಗಿಯಾಗಿದ್ದರು.

ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ತೆಲಂಗಾಣ ಕಾಂಗ್ರೆಸ್​ ನಾಯಕರು ತಮ್ಮ ಫೋಟೋಗಳ ಜೊತೆಗೆ ರಾಷ್ಟ್ರೀಯ ನಾಯಕರ ಕಟೌಟ್​ ಮತ್ತು ಬ್ಯಾನರ್​​ಗಳನ್ನು ಹಾಕಿದ್ದರು. ಅದರ ಒಂದು ಕಟೌಟ್​ನಲ್ಲಿ ಸೋನಿಯಾ ಗಾಂಧಿಯನ್ನು ಭಾರತ ಮಾತೆಗೆ ಹೋಲಿಕೆ ಮಾಡಿದ್ದಾರೆ. ರಾಷ್ಟ್ರಧ್ವಜ ಬಣ್ಣದ ಸೀರೆಯನ್ನು ಸೋನಿಯಾ ಗಾಂಧಿಗೆ ತೊಡಿಸಿ, ಆಭರಣಗಳನ್ನು ಹಾಕಿ ಭಾರತ ಮಾತೆಯ ರೀತಿಯಲ್ಲಿ ಕಟೌಟ್ ನಿಲ್ಲಿಸಲಾಗಿದೆ.

ಈ ಕಟೌಟ್ ಬಿಜೆಪಿಗರ ಕಣ್ಣು ಕೆಂಪಾಗುವಂತೆ ಮಾಡಿದೆ. ಕರ್ನಾಟಕ ಬಿಜೆಪಿ ಟ್ವೀಟ್ ಮಾಡಿ, ಜಾಮೀನಿನ ಮೇಲೆ ಹೊರಗಿರುವ ಸೋನಿಯಾ ಗಾಂಧಿಯನ್ನು ಹೋಲಿಸಿ ಭಾರತ ಮಾತೆಗೆ ಕಾಂಗ್ರೆಸ್​ ಅವಮಾನಿಸಿದೆ. ಸೋನಿಯಾ ಕಾಂಗ್ರೆಸ್ ನ ಹಗರಣಗಳ ಆರೋಪಿ ಮತ್ತು ಪಕ್ಷದ ರಾಜಮಾತೆ ಆಗಿರಬಹುದು. ಆದರೆ ಅವರು ಎಂದಿಗೂ ಸ್ಪಿರಿಟ್ ಆಫ್ ಭಾರತವನ್ನು ಪ್ರತಿನಿಧಿಸುವುದಿಲ್ಲ. ದೇಶದ ಕಲ್ಪನೆಗೆ ಸೋನಿಯಾಗಿಂತ ಹೆಚ್ಚಿನ ಹಾನಿಯನ್ನು ಯಾರೂ ಮಾಡಿಲ್ಲ. ಈ ಹೇಯ ಕೃತ್ಯಕ್ಕೆ ಕಾಂಗ್ರೆಸ್ ಇಡೀ ರಾಷ್ಟ್ರದ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

lokesh

Recent Posts

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

5 mins ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

1 hour ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

2 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

2 hours ago

ಓದುಗರ ಪತ್ರ: ರಸ್ತೆಗೆ ಡಾಂಬರೀಕರಣ ಮಾಡಿ

ಚಾಮರಾಜನಗರ ಜಿಲ್ಲೆಯ ಮರಿಯಾಲ ಗ್ರಾಮದ ಪ್ರಮುಖ ರಸ್ತೆಯು ಹಾಳಾಗಿದೆ. ಈ ರಸ್ತೆಯು ಕೆಲ್ಲಂಬಳ್ಳಿ, ಕಸ್ತೂರು ಮೂಲಕ ವಿವಿಧ ಗ್ರಾಮಗಳ ಮೂಲಕ…

2 hours ago

ಓದುಗರ ಪತ್ರ: ವಿಷಯದ ಗಂಭೀರತೆ ಮರೆತ ಪೊಲೀಸರು

ತಮಿಳುನಾಡಿನಲ್ಲಿ, ಕಳೆದ ಕೆಲವು ದಿನಗಳ ಹಿಂದೆ, ೧೦ ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಕೊಲೆಗೈದ ವಿಷಯಕ್ಕೆ ಸಂಬಂಧಿಸಿದಂತೆ…

2 hours ago