ಬೆಂಗಳೂರು : ಕಾಂಗ್ರೆಸ್ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೂ ಸಿಗುತ್ತಿಲ್ಲ, ಹಾಗಾಗಿ ಬೇರೆ ಪಕ್ಷಗಳಿಂದ ಆಮದು ಮಾಡಿಕೊಳ್ಳಲು ಮುಂದಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಮಲವನ್ನೇ ಅರಳಿಸುತ್ತೇವೆಂದು ಜನ ತೀರ್ಮಾನ ಮಾಡಿರುವಾಗ, ನಿಮ್ಮ ಹಳೇ ಬಂಡಿಗೆ ಎಷ್ಟೇ ಬಣ್ಣ ಬಳಿದರೂ ಬಂಡಿ ಮಾತ್ರ ಹೊಸತಾಗುವುದಿಲ್ಲ’ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದೆ.
‘ಕಾಂಗ್ರೆಸ್ನಲ್ಲಿ ಚುಕ್ಕಾಣಿ ಹಿಡಿದವರಿಗೆ ದುಡ್ಡೇ ದೊಡ್ಡಪ್ಪ. ಹಣಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ತಯಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಣಕ್ಕಾಗಿ ಟಿಕೆಟ್ ಮಾರಿಕೊಂಡು ಸ್ವಂತ ಸಮುದಾಯದವರಿಗೇ ಅನ್ಯಾಯ ಮಾಡಿದ್ದಾರೆಂಬ ಕೂಗು ದಾಸರಹಳ್ಳಿ ಕ್ಷೇತ್ರದಿಂದ ಕೇಳಿಬಂದಿದೆ. ಇನ್ನುಳಿದ ಕ್ಷೇತ್ರಗಳ ಕಥೆಯೂ ಇದೇ ಇರಬಹುದು’ ಎಂದು ಬಿಜೆಪಿ ಕಿಡಿಕಾರಿದೆ.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…