ಬೆಂಗಳೂರು : ಕಾಂಗ್ರೆಸ್ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೂ ಸಿಗುತ್ತಿಲ್ಲ, ಹಾಗಾಗಿ ಬೇರೆ ಪಕ್ಷಗಳಿಂದ ಆಮದು ಮಾಡಿಕೊಳ್ಳಲು ಮುಂದಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಮಲವನ್ನೇ ಅರಳಿಸುತ್ತೇವೆಂದು ಜನ ತೀರ್ಮಾನ ಮಾಡಿರುವಾಗ, ನಿಮ್ಮ ಹಳೇ ಬಂಡಿಗೆ ಎಷ್ಟೇ ಬಣ್ಣ ಬಳಿದರೂ ಬಂಡಿ ಮಾತ್ರ ಹೊಸತಾಗುವುದಿಲ್ಲ’ ಎಂದು ಕಾಂಗ್ರೆಸ್ ವಿರುದ್ಧ ಲೇವಡಿ ಮಾಡಿದೆ.
‘ಕಾಂಗ್ರೆಸ್ನಲ್ಲಿ ಚುಕ್ಕಾಣಿ ಹಿಡಿದವರಿಗೆ ದುಡ್ಡೇ ದೊಡ್ಡಪ್ಪ. ಹಣಕ್ಕಾಗಿ ಯಾವ ಮಟ್ಟಕ್ಕೂ ಇಳಿಯಲು ತಯಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಣಕ್ಕಾಗಿ ಟಿಕೆಟ್ ಮಾರಿಕೊಂಡು ಸ್ವಂತ ಸಮುದಾಯದವರಿಗೇ ಅನ್ಯಾಯ ಮಾಡಿದ್ದಾರೆಂಬ ಕೂಗು ದಾಸರಹಳ್ಳಿ ಕ್ಷೇತ್ರದಿಂದ ಕೇಳಿಬಂದಿದೆ. ಇನ್ನುಳಿದ ಕ್ಷೇತ್ರಗಳ ಕಥೆಯೂ ಇದೇ ಇರಬಹುದು’ ಎಂದು ಬಿಜೆಪಿ ಕಿಡಿಕಾರಿದೆ.
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…