BREAKING NEWS

ಕಾಂಗ್ರೆಸ್‌ಗೆ ಅಭ್ಯರ್ಥಿಗಳು ಸಿಗುತ್ತಿಲ್ಲ, ಆಮದು ಮಾಡಿಕೊಳ್ಳುತ್ತಿದೆ : ಬಿಜೆಪಿ

ಬೆಂಗಳೂರು : ಕಾಂಗ್ರೆಸ್‌ಗೆ ಗೆಲ್ಲುವ ಅಭ್ಯರ್ಥಿಗಳಲ್ಲ, ನಿಲ್ಲುವ ಅಭ್ಯರ್ಥಿಗಳೂ ಸಿಗುತ್ತಿಲ್ಲ, ಹಾಗಾಗಿ ಬೇರೆ ಪಕ್ಷಗಳಿಂದ ಆಮದು ಮಾಡಿಕೊಳ್ಳಲು ಮುಂದಾಗಿದೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾದ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಮಲವನ್ನೇ ಅರಳಿಸುತ್ತೇವೆಂದು ಜನ ತೀರ್ಮಾನ ಮಾಡಿರುವಾಗ, ನಿಮ್ಮ ಹಳೇ ಬಂಡಿಗೆ ಎಷ್ಟೇ ಬಣ್ಣ ಬಳಿದರೂ ಬಂಡಿ ಮಾತ್ರ ಹೊಸತಾಗುವುದಿಲ್ಲ’ ಎಂದು ಕಾಂಗ್ರೆಸ್‌ ವಿರುದ್ಧ ಲೇವಡಿ ಮಾಡಿದೆ.
‘ಕಾಂಗ್ರೆಸ್‌ನಲ್ಲಿ ಚುಕ್ಕಾಣಿ‌ ಹಿಡಿದವರಿಗೆ ದುಡ್ಡೇ ದೊಡ್ಡಪ್ಪ. ಹಣಕ್ಕಾಗಿ ಯಾವ‌ ಮಟ್ಟಕ್ಕೂ ಇಳಿಯಲು‌ ತಯಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹಣಕ್ಕಾಗಿ‌ ಟಿಕೆಟ್ ಮಾರಿಕೊಂಡು ಸ್ವಂತ ಸಮುದಾಯದವರಿಗೇ ಅನ್ಯಾಯ ಮಾಡಿದ್ದಾರೆಂಬ ಕೂಗು ದಾಸರಹಳ್ಳಿ ಕ್ಷೇತ್ರದಿಂದ ಕೇಳಿಬಂದಿದೆ. ಇನ್ನುಳಿದ ಕ್ಷೇತ್ರಗಳ ಕಥೆಯೂ ಇದೇ ಇರಬಹುದು’ ಎಂದು ಬಿಜೆಪಿ ಕಿಡಿಕಾರಿದೆ.

lokesh

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

24 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

24 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

24 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

24 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

24 hours ago