ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ‘ಅಶಿಸ್ತಿನ’ ವರ್ತನೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.
ಲೋಕಸಭೆಯಲ್ಲಿ ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ವಿರುದ್ಧ ಸರಣಿ ವಾಗ್ದಾಳಿ ನಡೆಸಿದ ರಂಜನ್ ಚೌಧರಿ, ಮಹಾಭಾರತವನ್ನು ಉಲ್ಲೇಖಿಸಿದ್ದಾರೆ. ಹಸ್ತಿನಾಪುರದಲ್ಲಾಗಲೀ ಅಥವಾ ಮಣಿಪುರದಲ್ಲಾಗಲೀ ಮಹಿಳೆಯರ ವಿರುದ್ಧ ಏನು ನಡೆಯುತ್ತಿದೆ ಎಂಬುದರ ಬಗ್ಗೆ ರಾಜ ಕುರುಡನಾಗಬಾರದು ಎಂದು ಚೌಧರಿ ಟೀಕಿಸಿದ್ದಾರೆ.
ಚೌಧರಿ ಟೀಕೆಗೆ ಗೃಹ ಸಚಿವ ಅಮಿತ್ ಶಾ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಚೌಧರಿ ಅವರು ಸಂಸತ್ತಿನಲ್ಲಿ ಸಂಯಮದಿಂದ ಮತ್ತು ಸದನದ ಸೌಜನ್ಯವನ್ನು ಕಾಪಾಡಿಕೊಳ್ಳುವಂತೆ ನೋಡಲು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಒತ್ತಾಯಿಸಿದ್ದಾರೆ.
ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರಿಗೆ ಯಾವುದೇ ಸಮಸ್ಯೆಗಳಿಲ್ಲದಿದ್ದಾಗ ಅಮಿತ್ ಶಾ ಯಾಕೆ ಕೋಪಗೊಳ್ಳುತ್ತಿದ್ದಾರೆ ಎಂದು ಚೌಧರಿ ಮರುಪ್ರಶ್ನೆ ಹಾಕಿದ್ದಾರೆ. ಧ್ರುವೀಕರಣ, ಕೋಮುವಾದ ಮತ್ತು ಕೇಸರಿಕರಣ ಭಾರತವನ್ನು ತೊರೆಯುವ ಸಮಯ ಬಂದಿದೆ ಎಂದು ಚೌಧರಿ ಹೇಳಿದ್ದು, ಬಿಜೆಪಿ ಸಂಸದರು ಚೌಧರಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಕೂಡಾ ಚೌಧರಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…
ನವದೆಹಲಿ: ಭಾರತ-ಅಮೇರಿಕಾ ಮಧ್ಯಂತರ ವ್ಯಾಪಾರ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ಒಪ್ಪಂದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ…
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…