BREAKING NEWS

ಲೋಕಸಭೆಯಿಂದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅಮಾನತು

ನವದೆಹಲಿ : ಲೋಕಸಭೆಯ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು ‘ಅಶಿಸ್ತಿನ’ ವರ್ತನೆಗಾಗಿ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ.

ಲೋಕಸಭೆಯಲ್ಲಿ ತಮ್ಮ ಭಾಷಣದ ವೇಳೆ ಪ್ರಧಾನಿ ಮೋದಿ ವಿರುದ್ಧ ಸರಣಿ ವಾಗ್ದಾಳಿ ನಡೆಸಿದ ರಂಜನ್‌ ಚೌಧರಿ, ಮಹಾಭಾರತವನ್ನು ಉಲ್ಲೇಖಿಸಿದ್ದಾರೆ. ಹಸ್ತಿನಾಪುರದಲ್ಲಾಗಲೀ ಅಥವಾ ಮಣಿಪುರದಲ್ಲಾಗಲೀ ಮಹಿಳೆಯರ ವಿರುದ್ಧ ಏನು ನಡೆಯುತ್ತಿದೆ ಎಂಬುದರ ಬಗ್ಗೆ ರಾಜ ಕುರುಡನಾಗಬಾರದು ಎಂದು ಚೌಧರಿ ಟೀಕಿಸಿದ್ದಾರೆ.

ಚೌಧರಿ ಟೀಕೆಗೆ ಗೃಹ ಸಚಿವ ಅಮಿತ್ ಶಾ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಚೌಧರಿ ಅವರು ಸಂಸತ್ತಿನಲ್ಲಿ ಸಂಯಮದಿಂದ ಮತ್ತು ಸದನದ ಸೌಜನ್ಯವನ್ನು ಕಾಪಾಡಿಕೊಳ್ಳುವಂತೆ ನೋಡಲು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಒತ್ತಾಯಿಸಿದ್ದಾರೆ.

ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಅವರಿಗೆ ಯಾವುದೇ ಸಮಸ್ಯೆಗಳಿಲ್ಲದಿದ್ದಾಗ ಅಮಿತ್‌ ಶಾ ಯಾಕೆ ಕೋಪಗೊಳ್ಳುತ್ತಿದ್ದಾರೆ ಎಂದು ಚೌಧರಿ ಮರುಪ್ರಶ್ನೆ ಹಾಕಿದ್ದಾರೆ. ಧ್ರುವೀಕರಣ, ಕೋಮುವಾದ ಮತ್ತು ಕೇಸರಿಕರಣ ಭಾರತವನ್ನು ತೊರೆಯುವ ಸಮಯ ಬಂದಿದೆ ಎಂದು ಚೌಧರಿ ಹೇಳಿದ್ದು, ಬಿಜೆಪಿ ಸಂಸದರು ಚೌಧರಿ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸ್ಪೀಕರ್‌ ಓಂ ಬಿರ್ಲಾ ಕೂಡಾ ಚೌಧರಿ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

andolanait

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

8 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

10 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

11 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

14 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago